<p>ದೇವರಹಿಪ್ಪರಗಿ: ಪ್ರಯತ್ನಂ ಸರ್ವ ಸಿದ್ದಿ ಸಾಧನಂ ಎನ್ನುವಂತೆ ಪ್ರಯತ್ನವಾದಿ ಎಂದಿಗೂ ಸೋಲುವುದಿಲ್ಲ. ಆಗಲ್ಲ ಎಂದು ಹಿಂಜರಿದವನು ಎಂದಿಗೂ ಗೆಲ್ಲುವುದಿಲ್ಲ ಎಂದು ವಿಜಯಪುರ ಗೆಜ್ಜಿ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೆಜ್ಜಿ ಹೇಳಿದರು.</p>.<p>ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಕಾಯಕ ದಾಸೋಹ ಪ್ರತಿಷ್ಠಾನದ 16 ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ, ಸ್ಪರ್ಧಾತ್ಮಕತೆ ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.</p>.<p>ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರತಿಷ್ಠಾನದಿಂದ ಸನ್ಮಾನಿಸಲಾಯಿತು. ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎ.ಎಸ್.ವಾಲೀಕಾರ ಅವರು ಬರೆದ ‘ಎ ಥಿಯರಿ ಆಫ್ ಟೆಂಪರೇಚರ್’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.</p>.<p>ಅರವಿಂದ ಬಿರಾದಾರ ಇವರಿಗೆ ದಾಸೋಹರತ್ನ ಹಾಗೂ ಶಂಕರಗೌಡ ಬಿರಾದಾರ ಇವರಿಗೆ ದಾಸೋಹ ರೈತರತ್ನ ಪ್ರಶಸ್ತಿಯನ್ನು ಪ್ರತಿಷ್ಠಾನದಿಂದ ಪ್ರದಾನ ಮಾಡಲಾಯಿತು. ಶೇಕಡ ನೂರರಷ್ಟು ಫಲಿತಾಂಶ ಬರಲು ಕಾರಣರಾದ ಸ್ಥಳೀಯ ಪ್ರೌಢಶಾಲೆ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸೋಮಶೇಖರ ಹಿರೇಮಠ(ದೇವರಹಿಪ್ಪರಗಿ) ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಎನ್.ಬಿ.ರೋಡಗಿ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಸಾಯಬಣ್ಣ ಸೊನ್ನಳ್ಳಿ, ಗುರುರಾಜ ಆಕಳವಾಡಿ, ಎ.ಎಸ್.ವಾಲೀಕಾರ ಮಾತನಾಡಿದರು. ವಿಜಯಪುರ ಅನುಗ್ರಹ ಆಸ್ಪತ್ರೆಯ ಸುನೀಲಗೌಡ ಪಾಟೀಲ, ಶರಣಯ್ಯ ಮಂಗಲಗಿ, ಶರಣಗೌಡ ಪಾಟೀಲಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-26-1432080956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವರಹಿಪ್ಪರಗಿ: ಪ್ರಯತ್ನಂ ಸರ್ವ ಸಿದ್ದಿ ಸಾಧನಂ ಎನ್ನುವಂತೆ ಪ್ರಯತ್ನವಾದಿ ಎಂದಿಗೂ ಸೋಲುವುದಿಲ್ಲ. ಆಗಲ್ಲ ಎಂದು ಹಿಂಜರಿದವನು ಎಂದಿಗೂ ಗೆಲ್ಲುವುದಿಲ್ಲ ಎಂದು ವಿಜಯಪುರ ಗೆಜ್ಜಿ ಕೆರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೆಜ್ಜಿ ಹೇಳಿದರು.</p>.<p>ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಕಾಯಕ ದಾಸೋಹ ಪ್ರತಿಷ್ಠಾನದ 16 ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ, ಸ್ಪರ್ಧಾತ್ಮಕತೆ ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.</p>.<p>ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರತಿಷ್ಠಾನದಿಂದ ಸನ್ಮಾನಿಸಲಾಯಿತು. ಸ್ಥಳೀಯ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎ.ಎಸ್.ವಾಲೀಕಾರ ಅವರು ಬರೆದ ‘ಎ ಥಿಯರಿ ಆಫ್ ಟೆಂಪರೇಚರ್’ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.</p>.<p>ಅರವಿಂದ ಬಿರಾದಾರ ಇವರಿಗೆ ದಾಸೋಹರತ್ನ ಹಾಗೂ ಶಂಕರಗೌಡ ಬಿರಾದಾರ ಇವರಿಗೆ ದಾಸೋಹ ರೈತರತ್ನ ಪ್ರಶಸ್ತಿಯನ್ನು ಪ್ರತಿಷ್ಠಾನದಿಂದ ಪ್ರದಾನ ಮಾಡಲಾಯಿತು. ಶೇಕಡ ನೂರರಷ್ಟು ಫಲಿತಾಂಶ ಬರಲು ಕಾರಣರಾದ ಸ್ಥಳೀಯ ಪ್ರೌಢಶಾಲೆ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸೋಮಶೇಖರ ಹಿರೇಮಠ(ದೇವರಹಿಪ್ಪರಗಿ) ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.</p>.<p>ಪ್ರತಿಷ್ಠಾನದ ಅಧ್ಯಕ್ಷ ಎನ್.ಬಿ.ರೋಡಗಿ, ಪಿಕೆಪಿಎಸ್ ಅಧ್ಯಕ್ಷ ಸಂಗನಗೌಡ ಬಿರಾದಾರ, ಸಾಯಬಣ್ಣ ಸೊನ್ನಳ್ಳಿ, ಗುರುರಾಜ ಆಕಳವಾಡಿ, ಎ.ಎಸ್.ವಾಲೀಕಾರ ಮಾತನಾಡಿದರು. ವಿಜಯಪುರ ಅನುಗ್ರಹ ಆಸ್ಪತ್ರೆಯ ಸುನೀಲಗೌಡ ಪಾಟೀಲ, ಶರಣಯ್ಯ ಮಂಗಲಗಿ, ಶರಣಗೌಡ ಪಾಟೀಲಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-26-1432080956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>