<p>ವಿಜಯಪುರ: ‘ನೀಟ್ ಸಂಕಷ್ಟದಿಂದ ಹತಾಶರಾಗಬೇಡಿ, ಅದನ್ನೇ ಒಂದು ಅವಕಾಶ ಎಂದು ಭಾವಿಸಿ’ ಎಂದು ಆರ್ಕೆಎಂ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.</p>.<p>ವಿಜಯಪುರದ ಆರ್ಕೆಎಂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಕ್ಸೆಲ್ ಅಕಾಡೆಮಿ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಸಿಇಟಿ ಹಾಗೂ ನೀಟ್ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಧೈರ್ಯ ಕಳೆದುಕೊಳ್ಳಬಾರದು. ಮರುಪರೀಕ್ಷೆಗೆ ಸಮರ್ಪಕವಾಗಿ ಸಿದ್ಧತೆ ನಡೆಸಬೇಕು. ಈ ವಿಚಾರವನ್ನು ರಾಜಕೀಯವಾಗಿ ಚರ್ಚಿಸುವುದಕ್ಕೋ ಅನವಶ್ಯಕ ಚಿಂತನೆ ಮಾಡುವುದಕ್ಕೋ ಮನಸ್ಸಿನಲ್ಲಿ ಅಲ್ಪ ಪ್ರಮಾಣದ ಜಾಗವನ್ನೂ ಕೊಡಬಾರದು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಕೆ. ಮುರಳೀಧರ್, ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ವಿಧಾನ, ಕಳೆದ ವರ್ಷದ ಕಟ್ಆಫ್ ವಿವರಗಳು ಹಾಗೂ ಸೀಟ್ ಆಯ್ಕೆ ಸಮಯದಲ್ಲಿ ಸಾಮಾನ್ಯವಾಗಿ ಮಾಡುವ ತಪ್ಪುಗಳ ಕುರಿತು ಅವರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಿವರವಾಗಿ ಮಾಹಿತಿ ನೀಡಿದರು.</p>.<p>ಪ್ರಾಂಶುಪಾಲೆ ಮೇಧಾ ಕರ್ಪೂರಮಠ, ಸಂಯೋಜಕ ಪ್ರಣೀತ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-1134448725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ‘ನೀಟ್ ಸಂಕಷ್ಟದಿಂದ ಹತಾಶರಾಗಬೇಡಿ, ಅದನ್ನೇ ಒಂದು ಅವಕಾಶ ಎಂದು ಭಾವಿಸಿ’ ಎಂದು ಆರ್ಕೆಎಂ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಭುಲಿಂಗಯ್ಯ ಕರ್ಪೂರಮಠ ಹೇಳಿದರು.</p>.<p>ವಿಜಯಪುರದ ಆರ್ಕೆಎಂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಕ್ಸೆಲ್ ಅಕಾಡೆಮಿ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಸಿಇಟಿ ಹಾಗೂ ನೀಟ್ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಧೈರ್ಯ ಕಳೆದುಕೊಳ್ಳಬಾರದು. ಮರುಪರೀಕ್ಷೆಗೆ ಸಮರ್ಪಕವಾಗಿ ಸಿದ್ಧತೆ ನಡೆಸಬೇಕು. ಈ ವಿಚಾರವನ್ನು ರಾಜಕೀಯವಾಗಿ ಚರ್ಚಿಸುವುದಕ್ಕೋ ಅನವಶ್ಯಕ ಚಿಂತನೆ ಮಾಡುವುದಕ್ಕೋ ಮನಸ್ಸಿನಲ್ಲಿ ಅಲ್ಪ ಪ್ರಮಾಣದ ಜಾಗವನ್ನೂ ಕೊಡಬಾರದು’ ಎಂದರು.</p>.<p>ಸಂಪನ್ಮೂಲ ವ್ಯಕ್ತಿ ಕೆ. ಮುರಳೀಧರ್, ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವ ವಿಧಾನ, ಕಳೆದ ವರ್ಷದ ಕಟ್ಆಫ್ ವಿವರಗಳು ಹಾಗೂ ಸೀಟ್ ಆಯ್ಕೆ ಸಮಯದಲ್ಲಿ ಸಾಮಾನ್ಯವಾಗಿ ಮಾಡುವ ತಪ್ಪುಗಳ ಕುರಿತು ಅವರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಿವರವಾಗಿ ಮಾಹಿತಿ ನೀಡಿದರು.</p>.<p>ಪ್ರಾಂಶುಪಾಲೆ ಮೇಧಾ ಕರ್ಪೂರಮಠ, ಸಂಯೋಜಕ ಪ್ರಣೀತ್ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-26-1134448725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>