ಬಸ್ ಚಾಲಕರು, ನಿರ್ವಾಹಕರು ಹಾಗು ಸಂಸ್ಥೆಯ ಸಿಬ್ಬಂದಿ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ, ಸಂಸ್ಥೆಯ ಬಲವರ್ಧನೆಗೆ ಶ್ರಮಿಸಬೇಕು ಎಂದರು. ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಎಂ.ಡಿ.ರಾಜೇಂದ್ರ ಚೋಳನ್ ಇದ್ದರು. ಅಪಘಾತ ರಹಿತ ಬಸ್ ಚಾಲನೆ ಮಾಡಿದ ಚಾಲಕರಿಗೆ ಬೆಳ್ಳಿ ಪದಕ, ಅಂತರ್ ವಿಭಾಗೀಯ ಕ್ರೀಡಾ ಮತ್ತು ಕಲಾ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.