ಈ ಬಗ್ಗೆ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಕಮಲಮ್ಮ,‘ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯಿತ್ರಿದೇವಿ, ಸಿ.ಆರ್.ಪಿ ಶಿವಕುಮಾರ್ ಕಾಳಜಿ ವಹಿಸಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆ ಆಡಳಿತ ಕಂಪನಿಗೆ ಮನವಿ ಮಾಡಿದ ಪರಿಣಾಮ ಆರೇಳು ತಿಂಗಳ ಹಿಂದೆ ವಿದ್ಯಾರ್ಥಿಗಳನ್ನು ಹಳೆ ಜಿ.ಕೆ.ಬಿ.ಎಂ.ಎಸ್ ಶಾಲೆಗೆ ಸ್ಥಳಾಂತರಿಸಿ ಶಾಲಾ ಕಟ್ಟಡ ನೆಲಸಮಗೊಳಿಸಿ ಕಟ್ಟಡ ನಿರ್ಮಿಸಲಾಗುತ್ತಿದೆ’ ಎಂದು ಮಾಹಿತಿ ಹಂಚಿಕೊಂಡರು.