‘ವಲಸೆ ಕಾರ್ಮಿಕರು ತಮ್ಮ ತವರಿಗೆ ಮರಳಿದ್ದಾರೆ. ಅವರಿಗೆ ತಮ್ಮ ಊರಲ್ಲಿ ಮನೆ ಇದೆ. ಆದರೆ, ಉದ್ಯೋಗ ಇಲ್ಲದಂತಾಗಿದೆ. ಆದಾಯ ಇಲ್ಲದೆ ಗ್ರಾಮೀಣ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ಈ ರೀತಿಯ ಎಲ್ಲ ಸಮಸ್ಯೆಗಳಿಂದ ಬಾಲಕಾರ್ಮಿಕರ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ. ಮಕ್ಕಳ ಅಕ್ರಮ ಸಾಗಾಣಿಕೆ ನಡೆಯುವ ಸಾಧ್ಯತೆ ಇದೆ. ಬಾಲ್ಯ ವಿವಾಹಗಳು ಹೆಚ್ಚಬಹುದು’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.