ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕೀಲರ ಪರಿಷತ್‌ಗೆ ಶಾಂತಿಯುತ ಮತದಾನ

Last Updated 27 ಮಾರ್ಚ್ 2018, 19:57 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ವಕೀಲರ ಪರಿಷತ್‌ನ 25 ಸದಸ್ಯ ಸ್ಥಾನಗಳಿಗೆ ಮಂಗಳವಾರ ರಾಜ್ಯದಾದ್ಯಂತ ನಡೆದ ಚುನಾವಣೆ ಶಾಂತಿಯುತವಾಗಿತ್ತು’ ಎಂದು ಹಿರಿಯ ವಕೀಲ ಜಯಕುಮಾರ್ ಎಸ್.ಪಾಟೀಲ ತಿಳಿಸಿದ್ದಾರೆ.

‘ಕುಷ್ಟಗಿಯಲ್ಲಿ ಮತಪತ್ರಗಳ ಕ್ರಮಸಂಖ್ಯೆ ತಪ್ಪಾಗಿದ್ದವು ಹಾಗೂ ಮತದಾರರ ಪಟ್ಟಿಯೊಳಗಿದ್ದ ಸಂಖ್ಯೆಗಿಂತ ಕಡಿಮೆ ಇದ್ದ ಕಾರಣ ಅಲ್ಲಿನ ಚುನಾವಣೆಯನ್ನು ಮುಂದೂಡಲಾಗಿದೆ. ಇದೇ 31ರಂದು ಇಲ್ಲಿ ಮರು ಚುನಾವಣೆ ನಡೆಯಲಿದೆ’ ಎಂದು ಅವರು ಮಂಗಳವಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ರಾಜ್ಯದ 280 ಕೇಂದ್ರಗಳಲ್ಲಿ ಮತದಾನ ನಡೆದಿದೆ. ಬೆಂಗಳೂರಿನಲ್ಲಿ ಶೇ 64ರಷ್ಟು ಪ್ರಮಾಣದ ಮತ ಚಲಾವಣೆ ಆಗಿದೆ. ಇತರೆಡೆ ಎಷ್ಟು ಪ್ರಮಾಣದ ಮತ ಚಲಾವಣೆಯಾಗಿದೆ ಎಂಬುದರ ಬಗ್ಗೆ ಪರಿಷತ್‌ಗೆ ಪೂರ್ಣ ಪ್ರಮಾಣದ ವರದಿ ಬಂದಿಲ್ಲ. ಬುಧವಾರ ಬೆಳಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ’ ಎಂದು ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT