<p><strong>ಬೆಂಗಳೂರು:</strong> ‘ಎಂಜಿನಿಯರಿಂಗ್ ಪದವಿಯ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಹಾಗೂ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಬಾಕಿ ಇರುವ ಪರೀಕ್ಷೆಗಳನ್ನು ನಡೆಸಬೇಕು’ ಎಂದುಸರ್ಕಾರದ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ಶಿಫಾರಸು ಮಾಡಿದ್ದಾರೆ.</p>.<p>ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೊಂದಿಗೆ ಗುರುವಾರ ಮಾತುಕತೆ ನಡೆಸಿ ಏಳು ಪ್ರಮುಖ ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಅವರು ಸಲ್ಲಿಸಿದರು.</p>.<p>ಎಂಜಿನಿಯರಿಂಗ್ ಕೋರ್ಸ್ನಲ್ಲಿ ಬಹುತೇಕ ವಿದ್ಯಾರ್ಥಿಗಳು ಉದ್ಯೋಗಗಳಿಗೆ ಆಯ್ಕೆಯಾಗಿರುತ್ತಾರೆ. ಆದ್ದರಿಂದ ಅವರಿಗೆ ಉತ್ತೀರ್ಣತೆಯ ಪ್ರಮಾಣ ಪತ್ರ ಅಗತ್ಯವಿರುತ್ತದೆ. ಈ ಕಾರಣಕ್ಕಾಗಿ ಬೇಗ ಪರೀಕ್ಷೆಗಳನ್ನು ಮುಗಿಸಬೇಕು ಎಂದು ಸಲಹೆ ನೀಡಿದರು.</p>.<p><strong>ಜಯಂತಿಗಳಿಗೆ ರಜೆ ಬೇಡ: </strong>ಗಾಂಧಿ ಜಯಂತಿ ಸೇರಿದಂತೆ ಎಲ್ಲ ಗಣ್ಯ ವ್ಯಕ್ತಿಗಳು ಮತ್ತು ಮಹನೀಯರ ಜಯಂತಿಗಳಿಗೆ ಶಾಲಾ– ಕಾಲೇಜುಗಳಿಗೆ ರಜೆ ನೀಡುವುದರ ಬದಲು ಅರ್ಥಪೂರ್ಣ ಆಚರಣೆ ನಡೆಸಬೇಕು ಎಂದೂ ಶಿಫಾರಸು ಮಾಡಿದರು.</p>.<p>ವಿದ್ಯಾರ್ಥಿಗಳಿಗೆ ರಜೆ ನೀಡುವುದರ ಬದಲು, ಶಾಲಾ– ಕಾಲೇಜುಗಳಲ್ಲಿ ಅಂತಹ ಗಣ್ಯ ವ್ಯಕ್ತಿಗಳ ಕುರಿತು ಉಪನ್ಯಾಸ, ಕಾರ್ಯಾಗಾರ ಆಯೋಜಿಸಿ ಹೆಚ್ಚಿನ ಅರಿವು ಮೂಡಿಸಬೇಕು. ಇದರಿಂದ ವಿದ್ಯಾರ್ಥಿಗಳು ಜ್ಞಾನವಂತರಾಗಲು ಸಹಾಯವಾಗುತ್ತದೆ. ಜಯಂತಿಗಳೂ ಅರ್ಥಪೂರ್ಣವಾಗುತ್ತವೆ ಎಂದು ಅವರು ಹೇಳಿದರು.</p>.<p>ಕೋವಿಡ್–19 ಸಂಕಷ್ಟ ಮುಗಿದ ಬಳಿಕ ಶಿಕ್ಷಣ ವ್ಯವಸ್ಥೆಯನ್ನು ಮೊದಲಿನ ಸ್ಥಿತಿಗೆ ತರುವುದು ದೊಡ್ಡ ಸವಾಲು. ಹೀಗಾಗಿ ಕೆಲವು ತ್ಯಾಗಗಳನ್ನು ಮಾಡಲೇಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.</p>.<p>ಈ ವರದಿಯ ವಿವಿಧ ಅಂಶಗಳ ಬಗ್ಗೆ ಚರ್ಚಿಸಿದ ಅಶ್ವತ್ಥನಾರಾಯಣ ಅವರು, ಜಯಂತಿಗಳ ರಜೆ ವಿಚಾರದಲ್ಲಿ ನಿರ್ಧಾರವನ್ನು ಮುಖ್ಯಮಂತ್ರಿಗಳೇ ಕೈಗೊಳ್ಳಬೇಕು ಎಂದು ದೊರೆಸ್ವಾಮಿ ಅವರಿಗೆ ಮನವರಿಕೆ ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಎಂಜಿನಿಯರಿಂಗ್ ಪದವಿಯ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಹಾಗೂ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಬಾಕಿ ಇರುವ ಪರೀಕ್ಷೆಗಳನ್ನು ನಡೆಸಬೇಕು’ ಎಂದುಸರ್ಕಾರದ ಶಿಕ್ಷಣ ಸುಧಾರಣೆ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಅವರು ಶಿಫಾರಸು ಮಾಡಿದ್ದಾರೆ.</p>.<p>ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರೊಂದಿಗೆ ಗುರುವಾರ ಮಾತುಕತೆ ನಡೆಸಿ ಏಳು ಪ್ರಮುಖ ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಅವರು ಸಲ್ಲಿಸಿದರು.</p>.<p>ಎಂಜಿನಿಯರಿಂಗ್ ಕೋರ್ಸ್ನಲ್ಲಿ ಬಹುತೇಕ ವಿದ್ಯಾರ್ಥಿಗಳು ಉದ್ಯೋಗಗಳಿಗೆ ಆಯ್ಕೆಯಾಗಿರುತ್ತಾರೆ. ಆದ್ದರಿಂದ ಅವರಿಗೆ ಉತ್ತೀರ್ಣತೆಯ ಪ್ರಮಾಣ ಪತ್ರ ಅಗತ್ಯವಿರುತ್ತದೆ. ಈ ಕಾರಣಕ್ಕಾಗಿ ಬೇಗ ಪರೀಕ್ಷೆಗಳನ್ನು ಮುಗಿಸಬೇಕು ಎಂದು ಸಲಹೆ ನೀಡಿದರು.</p>.<p><strong>ಜಯಂತಿಗಳಿಗೆ ರಜೆ ಬೇಡ: </strong>ಗಾಂಧಿ ಜಯಂತಿ ಸೇರಿದಂತೆ ಎಲ್ಲ ಗಣ್ಯ ವ್ಯಕ್ತಿಗಳು ಮತ್ತು ಮಹನೀಯರ ಜಯಂತಿಗಳಿಗೆ ಶಾಲಾ– ಕಾಲೇಜುಗಳಿಗೆ ರಜೆ ನೀಡುವುದರ ಬದಲು ಅರ್ಥಪೂರ್ಣ ಆಚರಣೆ ನಡೆಸಬೇಕು ಎಂದೂ ಶಿಫಾರಸು ಮಾಡಿದರು.</p>.<p>ವಿದ್ಯಾರ್ಥಿಗಳಿಗೆ ರಜೆ ನೀಡುವುದರ ಬದಲು, ಶಾಲಾ– ಕಾಲೇಜುಗಳಲ್ಲಿ ಅಂತಹ ಗಣ್ಯ ವ್ಯಕ್ತಿಗಳ ಕುರಿತು ಉಪನ್ಯಾಸ, ಕಾರ್ಯಾಗಾರ ಆಯೋಜಿಸಿ ಹೆಚ್ಚಿನ ಅರಿವು ಮೂಡಿಸಬೇಕು. ಇದರಿಂದ ವಿದ್ಯಾರ್ಥಿಗಳು ಜ್ಞಾನವಂತರಾಗಲು ಸಹಾಯವಾಗುತ್ತದೆ. ಜಯಂತಿಗಳೂ ಅರ್ಥಪೂರ್ಣವಾಗುತ್ತವೆ ಎಂದು ಅವರು ಹೇಳಿದರು.</p>.<p>ಕೋವಿಡ್–19 ಸಂಕಷ್ಟ ಮುಗಿದ ಬಳಿಕ ಶಿಕ್ಷಣ ವ್ಯವಸ್ಥೆಯನ್ನು ಮೊದಲಿನ ಸ್ಥಿತಿಗೆ ತರುವುದು ದೊಡ್ಡ ಸವಾಲು. ಹೀಗಾಗಿ ಕೆಲವು ತ್ಯಾಗಗಳನ್ನು ಮಾಡಲೇಬೇಕಾಗಿದೆ ಎಂದು ಅವರು ಪ್ರತಿಪಾದಿಸಿದರು.</p>.<p>ಈ ವರದಿಯ ವಿವಿಧ ಅಂಶಗಳ ಬಗ್ಗೆ ಚರ್ಚಿಸಿದ ಅಶ್ವತ್ಥನಾರಾಯಣ ಅವರು, ಜಯಂತಿಗಳ ರಜೆ ವಿಚಾರದಲ್ಲಿ ನಿರ್ಧಾರವನ್ನು ಮುಖ್ಯಮಂತ್ರಿಗಳೇ ಕೈಗೊಳ್ಳಬೇಕು ಎಂದು ದೊರೆಸ್ವಾಮಿ ಅವರಿಗೆ ಮನವರಿಕೆ ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>