<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಂಗಳೂರು: </strong>ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ (ಆಗಸ್ಟ್ 13) ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.</p>.<p>ಅಗತ್ಯ ಸೌಲಭ್ಯಗಳಿದ್ದರೆ ಆನ್ಲೈನ್ ಮೂಲಕವೇ ದಾಖಲಾತಿ ಪ್ರಕ್ರಿಯೆ ನಿರ್ವಹಿಸಬೇಕು. ಅಂಥ ವ್ಯವಸ್ಥೆ ಇಲ್ಲದ ಕಾಲೇಜುಗಳು ಅರ್ಜಿ ವಿತರಣೆ ಪ್ರಕ್ರಿಯೆಯನ್ನು ಕೋವಿಡ್-19 ತಡೆ ಸೂಚನೆಗಳಿಗೆ ಅನುಗುಣವಾಗಿ ನಿರ್ವಹಿಸಬೇಕು ಎಂದು ಸುತ್ತೋಲೆ ತಿಳಿಸಿದೆ.</p>.<p>ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಗುಂಪು ಸೇರಲು ಅವಕಾಶ ಕೊಡಬಾರದು. ಆಯ್ಕೆ ಪಟ್ಟಿ ಪ್ರಕಟಿಸಿದ ನಂತರವೂ ವಿದ್ಯಾರ್ಥಿಗಳ ದಾಖಲಾತಿಗೆ ತಂಡಗಳನ್ನು ವಿಂಗಡಿಸಬೇಕು ಎಂದು ಹೇಳಲಾಗಿದೆ.</p>.<p>ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು 2020-21ರ ಸಾಲಿಗೆ ಯಾವುದೇ ಶುಲ್ಕ ಹೆಚ್ಚಿಸುವಂತಿಲ್ಲ. ಕಳೆದ ಸಾಲಿಗಿಂತ ಕಡಿಮೆ ಶುಲ್ಕ ಪಡೆಯಲು ಆಡಳಿತ ಮಂಡಳಿಗಳಿಗೆ ಸ್ವಾತಂತ್ರ್ಯವಿದೆ ಎಂದು ನಿರ್ದೇಶಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಂಗಳೂರು: </strong>ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ (ಆಗಸ್ಟ್ 13) ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಆರಂಭಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.</p>.<p>ಅಗತ್ಯ ಸೌಲಭ್ಯಗಳಿದ್ದರೆ ಆನ್ಲೈನ್ ಮೂಲಕವೇ ದಾಖಲಾತಿ ಪ್ರಕ್ರಿಯೆ ನಿರ್ವಹಿಸಬೇಕು. ಅಂಥ ವ್ಯವಸ್ಥೆ ಇಲ್ಲದ ಕಾಲೇಜುಗಳು ಅರ್ಜಿ ವಿತರಣೆ ಪ್ರಕ್ರಿಯೆಯನ್ನು ಕೋವಿಡ್-19 ತಡೆ ಸೂಚನೆಗಳಿಗೆ ಅನುಗುಣವಾಗಿ ನಿರ್ವಹಿಸಬೇಕು ಎಂದು ಸುತ್ತೋಲೆ ತಿಳಿಸಿದೆ.</p>.<p>ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಗುಂಪು ಸೇರಲು ಅವಕಾಶ ಕೊಡಬಾರದು. ಆಯ್ಕೆ ಪಟ್ಟಿ ಪ್ರಕಟಿಸಿದ ನಂತರವೂ ವಿದ್ಯಾರ್ಥಿಗಳ ದಾಖಲಾತಿಗೆ ತಂಡಗಳನ್ನು ವಿಂಗಡಿಸಬೇಕು ಎಂದು ಹೇಳಲಾಗಿದೆ.</p>.<p>ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳು 2020-21ರ ಸಾಲಿಗೆ ಯಾವುದೇ ಶುಲ್ಕ ಹೆಚ್ಚಿಸುವಂತಿಲ್ಲ. ಕಳೆದ ಸಾಲಿಗಿಂತ ಕಡಿಮೆ ಶುಲ್ಕ ಪಡೆಯಲು ಆಡಳಿತ ಮಂಡಳಿಗಳಿಗೆ ಸ್ವಾತಂತ್ರ್ಯವಿದೆ ಎಂದು ನಿರ್ದೇಶಕರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>