ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 75ರಷ್ಟು ಸಿಎಸ್‌ಆರ್‌ ಹಣ ವ್ಯರ್ಥ

Last Updated 9 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್) ಬಳಕೆಯಾಗುತ್ತಿರುವ ಶೇ 75ರಷ್ಟು ಹಣ ವ್ಯರ್ಥವಾಗುತ್ತಿದೆ ಎಂದು ಸಂಪರ್ಕ್‌ ಫೌಂಡೇಷನ್‌ನ ಸ್ಥಾಪಕ ಅಧ್ಯಕ್ಷ ವಿನೀತ್‌ ನಾಯರ್‌ ಬೇಸರ ವ್ಯಕ್ತಪಡಿಸಿದರು.

ಇನ್‌ಸ್ಟಿಟ್ಯೂಟ್‌ ಆಫ್‌ ಡೈರೆಕ್ಟರ್ಸ್‌ (ಐಒಡಿ) ವತಿಯಿಂದ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘12ನೇ ಅಂತರರಾಷ್ಟ್ರೀಯ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ಸಮ್ಮೇಳನ ಹಾಗೂ ಗೋಲ್ಡನ್‌ ಪಿಕಾಕ್‌ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಸಿಎಸ್‌ಆರ್‌ ಹಣ ಎಷ್ಟು ಬಳಕೆ ಮಾಡಿದ್ದೇವೆ ಎಂಬುದು ಮುಖ್ಯವಲ್ಲ. ಅದರಿಂದ ಜನರ ಅಭಿವೃದ್ಧಿ ಯಾವ ಪ್ರಮಾಣದಲ್ಲಿ ಆಗಿದೆ ಎಂಬುದು ಅತಿ
ಮುಖ್ಯ. ಸಿಎಸ್‌ಆರ್‌ ಹಣದ ಅಂಕಿ–ಅಂಶಗಳಿಂದ ದೇಶ ಬದಲಾಗುವುದಿಲ್ಲ. ಗ್ರಾಮೀಣ ಜನರ ಬದುಕನ್ನು ಸುಧಾರಿಸುವ ಆವಿಷ್ಕಾರಗಳಿಗೆ ಈ ಹಣ ಬಳಸಬೇಕು’ ಎಂದು ಸಲಹೆ ನೀಡಿದರು.

ದೇಶವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಎಲ್ಲವನ್ನೂ ಸರ್ಕಾರಗಳೇ ಪರಿಹರಿಸುತ್ತವೆ ಎಂಬ ಭರವಸೆ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಅಂತಹ ಸಮಸ್ಯೆಗಳ ಪರಿಹಾರಕ್ಕೆ ಎಲ್ಲರೂ ಕಂಕಣಬದ್ಧರಾಗಬೇಕು. ಸಿಎಸ್‌ಆರ್‌ ಹಣ ವ್ಯರ್ಥವಾಗದಂತೆ ನೋಡಿ
ಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ‘ಕಾರ್ಪೊರೇಟ್‌ ಕಂಪನಿಗಳಲ್ಲಿ ಸಾಮಾ
ಜಿಕ ವೈವಿಧ್ಯ ಕಡಿಮೆ ಇದೆ. ನಿರ್ದೇ
ಶಕರ ಮಂಡಳಿಗಳಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ. ಅವರಿಗೂ ಅವಕಾಶ ನೀಡಬೇಕು’ ಎಂದು ಸಲಹೆ ನೀಡಿದರು.

ದೇಶದಲ್ಲಿ ಸೇವಾ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗು ತ್ತಿವೆ. ಆರೋಗ್ಯ ಕ್ಷೇತ್ರವು ದೇಶದ ನಿಜ
ವಾದ ಶಕ್ತಿಯಾಗಿದೆ. ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ವಿದೇಶಗಳಿಂದ ರೋಗಿಗಳು ಇಲ್ಲಿಗೆ ಬರುತ್ತಿದ್ದಾರೆ. ಈ ಕ್ಷೇತ್ರದ ಬಗ್ಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಅವರು ಹೇಳಿದರು.

ವಿನೀತ್‌ ನಾಯರ್‌ ಅವರಿಗೆ ‘ಗೋಲ್ಡನ್‌ ಪಿಕಾಕ್‌ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ರಾಜ್ಯದ ಆಂತರಿಕ ಉತ್ಪನ್ನದಲ್ಲಿ (ಜಿಡಿಪಿ) ಸೇವಾ ಕ್ಷೇತ್ರ ಶೇ 65ರಷ್ಟು, ಕೃಷಿ ಶೇ 10ರಷ್ಟು ಹಾಗೂ ತಯಾರಿಕಾ ಕ್ಷೇತ್ರದಿಂದ ಶೇ 24ರಷ್ಟು ಪಾಲಿದೆ.
-ಟಿ.ಎಂ.ವಿಜಯಭಾಸ್ಕರ್‌, ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ

‘ಜಾತಿ ವ್ಯವಸ್ಥೆಯಿಂದ ಅಸಮಾನತೆ’

ದೇಶದಲ್ಲಿ ಜಾತಿ ವ್ಯವಸ್ಥೆ ಪ್ರಬಲವಾಗಿದೆ. ಈ ಕಾರಣದಿಂದಲೇ ಅಸಮಾನತೆ ಹೆಚ್ಚಾಗಿದೆ. ಜಾತಿ ಕಲ್ಪನೆಯನ್ನು ಜನರ ಮನಸ್ಸಿನಿಂದ ಕಿತ್ತೊಗೆಯಬೇಕು. ಸಿಎಸ್‌ಆರ್‌ ಹಣವನ್ನು ಬಳಕೆ ಮಾಡಿಕೊಂಡು ಅಸಮಾನತೆಯನ್ನು ನಿವಾರಿಸಬೇಕು. ಶಾಲೆ–ಕಾಲೇಜು ಹಾಗೂ ಆಸ್ಪತ್ರೆಗಳ ನಿರ್ಮಾಣದ ಮೂಲಕ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರವನ್ನು ಬಲಗೊಳಿಸಬೇಕು ಎಂದು ಐಒಡಿ ಬೆಂಗಳೂರು ವಲಯದ ಅಧ್ಯಕ್ಷ ಅರುಣ್‌ ಬಾಲಕೃಷ್ಣನ್‌ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT