ಮಾಧ್ಯಮ ಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಸಂಘದ ಅಧ್ಯಕ್ಷ ಎನ್.ಮಹದೇವಸ್ವಾಮಿ, ‘ಸೇವಾ ಜ್ಯೇಷ್ಠತಾ ಪಟ್ಟಿ ತಯಾರಿಸುವಾಗ ಪರಿಶಿಷ್ಟ ಜಾತಿ ನೌಕರರಿಗೆ ಅನ್ಯಾಯವಾಗಿದೆ. ಶೇ 18ಕ್ಕಿಂತ ಹೆಚ್ಚಿನ ಪ್ರಮಾಣದ ಮೀಸಲು ಮಿತಿ ದಾಟಿ ಬಡ್ತಿ ನೀಡಿದವರ ವಿರುದ್ಧ ಮಾತ್ರ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ ಸಾರಾಸಗಟಾಗಿ ಎಲ್ಲರಿಗೂ ಹಿಂಬಡ್ತಿ ನೀಡಲಾಗುತ್ತಿದೆ. ಇದು ತಪ್ಪು. ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗುತ್ತಿದೆ’ ಎಂದು ಅವರು ದೂರಿದರು.