‘ಜೀವನದ ಪ್ರತಿ ಹೆಜ್ಜೆಗಳನ್ನು ಹೇಗೆ ಸ್ವತಂತ್ರವಾಗಿ ನಿರ್ವಹಿಸಬೇಕು ಎನ್ನುವುದನ್ನು ಈ ಶಿಬಿರ ನನಗೆ ಕಲಿಸಿದೆ’ ಎಂದು ಬೆಂಗಳೂರಿನ ಶ್ರೀಕರ ದೇಸು ಮತ್ತು ಮಲ್ಟಿ ಎಕ್ಸಿಸ್ ಟ್ರೇನರ್ನಲ್ಲಿ ಭಾಗವಹಿಸಿದ್ದ ಆಕಾಂಕ್ಷಾ ಪ್ರಭು ತಮ್ಮಅನುಭವ ಹಂಚಿಕೊಂಡಿದ್ದಾರೆ. ಜಗತ್ತಿನ ವಿವಿಧ ಭಾಗಗಳಿಂದ ಬಂದ ವಿದ್ಯಾರ್ಥಿಗಳನ್ನು ಭೇಟಿಯಾಗಿದ್ದು ಅತ್ಯಂತ ರೋಮಾಂಚನಕಾರಿಯಾಗಿತ್ತು ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.