<p><strong>ಬೆಂಗಳೂರು: </strong>ಮುಂದಿನ ಶೈಕ್ಷಣಿಕ ಸಾಲಿನಿಂದಲೇ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ರಾಜ್ಯದಲ್ಲೂ ಜಾರಿಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ವಿಕಾಸಸೌಧದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಾರ್ಯಪಡೆಯನ್ನೂ ರಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ಒಂದೇ ವೇದಿಕೆಗೆ: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ವೇದಿಕೆಗೆ ತಂದು, ‘ಏಕರೂಪ ವ್ಯವಸ್ಥೆ’ ಜಾರಿಗೊಳಿಸಲಾಗುವುದು. ವಿ.ವಿ.ಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ, ಆಡಳಿತ ಸ್ವರೂಪ ಏಕ ರೀತಿಯಲ್ಲಿ ಇರುತ್ತದೆ. ಇದರಿಂದ ಒಂದೆಡೆ ಮಾಹಿತಿ ಲಭ್ಯವಾಗಲಿದ್ದು, ಪಾರದರ್ಶಕ ಆಡಳಿತ ಸಾಧ್ಯವಾಗಲಿದೆ ಎಂದು ಹೇಳಿದರು.</p>.<p>ಹೊಸ ಕಾಲೇಜುಗಳಿಗೆ ಅನುಮೋದನೆ, ಹೊಸ ಕೋರ್ಸ್ಗಳಿಗೆ ಸಂಯೋಜನೆ ನೀಡುವ ಮುನ್ನ ಕನಿಷ್ಠ ಮೂಲ ಸೌಕರ್ಯಗಳ ಬಗ್ಗೆ<br />ಗಮನ ಹರಿಸಬೇಕು. ಈ ವಿಚಾರದಲ್ಲಿ ಲೋಪಗಳಾಗಿದ್ದರೆ ಸಂಬಂಧಿಸಿದ ವಿ.ವಿ ಕುಲಪತಿ, ಕುಲಸಚಿವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.</p>.<p>ಕೆಇಎ ನೇಮಕಾತಿ ಮಾಡಲ್ಲ: ವಿ.ವಿ.ಗಳಲ್ಲಿ ಖಾಲಿ ಇರುವಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ನೇಮಕಾತಿ ಮಾಡುವುದಿಲ್ಲ. ಕೇವಲ ಅರ್ಜಿ ಆಹ್ವಾನಿಸಿ, ಅವುಗಳನ್ನು ವಿಂಗಡಿಸಿ, ಮೌಲ್ಯಮಾಪನ ಮಾಡಲಾಗುತ್ತದೆ. ಒಂದು ಹುದ್ದೆಗೆ ಮೂವರು ಅಭ್ಯರ್ಥಿಗಳನ್ನು ಆಯ್ಕೆಮಾಡಿ ವಿವರಗಳ ಪಟ್ಟಿಯನ್ನು ಸಂಬಂಧಿಸಿದ ವಿ.ವಿ.ಗೆ ನೀಡಲಾಗುತ್ತದೆ. ನಂತರ ವಿ.ವಿ.ಗಳು ಈ ಪಟ್ಟಿಯಲ್ಲಿ ಇರುವ ಅರ್ಹರನ್ನು ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ವಿ.ವಿ.ಗಳ ಅಧಿಕಾರಕ್ಕೆ ಕತ್ತರಿ ಹಾಕುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಪ್ರಾಂಶುಪಾಲರ ನೇಮಕ: ಪದವಿ ಕಾಲೇಜುಗಳ 400 ಪ್ರಾಂಶುಪಾಲರು, 1600 ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.</p>.<p>‘ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಲಿಖಿತ ಪರೀಕ್ಷೆ ನಡೆಸಲಿದ್ದು, ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಂದಿನ ಶೈಕ್ಷಣಿಕ ಸಾಲಿನಿಂದಲೇ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ರಾಜ್ಯದಲ್ಲೂ ಜಾರಿಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.</p>.<p>ವಿಕಾಸಸೌಧದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಾರ್ಯಪಡೆಯನ್ನೂ ರಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ಒಂದೇ ವೇದಿಕೆಗೆ: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಒಂದೇ ವೇದಿಕೆಗೆ ತಂದು, ‘ಏಕರೂಪ ವ್ಯವಸ್ಥೆ’ ಜಾರಿಗೊಳಿಸಲಾಗುವುದು. ವಿ.ವಿ.ಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ, ಆಡಳಿತ ಸ್ವರೂಪ ಏಕ ರೀತಿಯಲ್ಲಿ ಇರುತ್ತದೆ. ಇದರಿಂದ ಒಂದೆಡೆ ಮಾಹಿತಿ ಲಭ್ಯವಾಗಲಿದ್ದು, ಪಾರದರ್ಶಕ ಆಡಳಿತ ಸಾಧ್ಯವಾಗಲಿದೆ ಎಂದು ಹೇಳಿದರು.</p>.<p>ಹೊಸ ಕಾಲೇಜುಗಳಿಗೆ ಅನುಮೋದನೆ, ಹೊಸ ಕೋರ್ಸ್ಗಳಿಗೆ ಸಂಯೋಜನೆ ನೀಡುವ ಮುನ್ನ ಕನಿಷ್ಠ ಮೂಲ ಸೌಕರ್ಯಗಳ ಬಗ್ಗೆ<br />ಗಮನ ಹರಿಸಬೇಕು. ಈ ವಿಚಾರದಲ್ಲಿ ಲೋಪಗಳಾಗಿದ್ದರೆ ಸಂಬಂಧಿಸಿದ ವಿ.ವಿ ಕುಲಪತಿ, ಕುಲಸಚಿವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.</p>.<p>ಕೆಇಎ ನೇಮಕಾತಿ ಮಾಡಲ್ಲ: ವಿ.ವಿ.ಗಳಲ್ಲಿ ಖಾಲಿ ಇರುವಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ನೇಮಕಾತಿ ಮಾಡುವುದಿಲ್ಲ. ಕೇವಲ ಅರ್ಜಿ ಆಹ್ವಾನಿಸಿ, ಅವುಗಳನ್ನು ವಿಂಗಡಿಸಿ, ಮೌಲ್ಯಮಾಪನ ಮಾಡಲಾಗುತ್ತದೆ. ಒಂದು ಹುದ್ದೆಗೆ ಮೂವರು ಅಭ್ಯರ್ಥಿಗಳನ್ನು ಆಯ್ಕೆಮಾಡಿ ವಿವರಗಳ ಪಟ್ಟಿಯನ್ನು ಸಂಬಂಧಿಸಿದ ವಿ.ವಿ.ಗೆ ನೀಡಲಾಗುತ್ತದೆ. ನಂತರ ವಿ.ವಿ.ಗಳು ಈ ಪಟ್ಟಿಯಲ್ಲಿ ಇರುವ ಅರ್ಹರನ್ನು ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ವಿ.ವಿ.ಗಳ ಅಧಿಕಾರಕ್ಕೆ ಕತ್ತರಿ ಹಾಕುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಪ್ರಾಂಶುಪಾಲರ ನೇಮಕ: ಪದವಿ ಕಾಲೇಜುಗಳ 400 ಪ್ರಾಂಶುಪಾಲರು, 1600 ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.</p>.<p>‘ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಲಿಖಿತ ಪರೀಕ್ಷೆ ನಡೆಸಲಿದ್ದು, ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>