<p><strong>ಬೆಂಗಳೂರು: </strong>ಶಿಕ್ಷಣ ಹಕ್ಕು ಕಾಯ್ದೆ(ಆರ್ಟಿಇ) 9 ಮತ್ತು 10 ನೇ ತರಗತಿಗಳಿಗೂ ವಿಸ್ತರಿಸಬೇಕು ಎಂಬ ಪೋಷಕರ ಒತ್ತಾಯಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ 2020–21 ನೇ ಸಾಲಿಗೆ ಪ್ರವೇಶಕ್ಕಾಗಿ ದುರ್ಬಲ ವರ್ಗಕ್ಕೆ ಸೇರಿದ ಮಕ್ಕಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಇದೇ 19 ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ಮತ್ತು ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳ ಮಾಹಿತಿ ಪ್ರಕಟವಾಗಲಿದೆ.</p>.<p>ಇದೇ 26 ರಿಂದ ಏಪ್ರಿಲ್ 20 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಏ. 27 ರಂದು ಲಾಟರಿ ಮೂಲಕ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಮೇ 5 ರಿಂದ ದಾಖಲಾಗಿ ಪ್ರಕ್ರಿಯೆ ಆರಂಭವಾಗಲಿದೆ.</p>.<p>ಕಳೆದ ಸಾಲಿನಂತೆ ಈವರ್ಷವೂ ನೆರೆಹೊರೆ ಶಾಲೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಕೊನೆಯಲ್ಲಿ ಖಾಸಗಿ ಶಾಲೆಗಳ ಸೀಟು ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಮೇ 21 ರಂದು ಆನ್ಲೈನ್ನಲ್ಲಿ 2 ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದ್ದು, ಮೇ 22 ರಿಂದ 30 ರ ನಡುವೆ 2 ನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ನಡೆಯಲಿದೆ.</p>.<p><strong>ಬೆಂಗಳೂರಲ್ಲಿ 2 ವಾರ್ಡ್ಗಳಲ್ಲಿ ಆರ್ಟಿಇ:</strong> ಸರ್ಕಾರದ ಹೊಸ ನಿಯಮದಿಂದಾಗಿ ಕಳೆದ ವರ್ಷದಂತೆ ಈ ವರ್ಷವೂ ಬೆಂಗಳೂರಿನ್ 198 ವಾರ್ಡ್ಗಳ ಪೈಕಿ ಎರಡು ವಾರ್ಡ್ಗಳಲ್ಲಿ ಮಾತ್ರ (ಗಿರಿನಗರ, ಗಣೇಶ ಮಂದಿರ) ಆರ್ಟಿಇ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಿಗೆ ದಾಳಲಾಗುವ ಅವಕಾಶವಿದೆ. ಉಳಿದ ಕಡೆಗಳಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿಗಷ್ಟೇ ಸೇರಿಸಿಕೊಳ್ಳಬೇಕಾಗುತ್ತದೆ.</p>.<p>ರಾಜ್ಯದ ಇತರ ಕಡೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಈ ಮೊದಲ ಲಭ್ಯವಿದ್ದ 1.52 ಲಕ್ಷ ಆರ್ಟಿಇ ಸೀಟುಗಳ ಬದಲಿಗದೆ ಇದೀಗ ಸೀಟುಗಳ ಸಂಖ್ಯೆ 17 ಸಾವಿರಕ್ಕೆ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಿಕ್ಷಣ ಹಕ್ಕು ಕಾಯ್ದೆ(ಆರ್ಟಿಇ) 9 ಮತ್ತು 10 ನೇ ತರಗತಿಗಳಿಗೂ ವಿಸ್ತರಿಸಬೇಕು ಎಂಬ ಪೋಷಕರ ಒತ್ತಾಯಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿಲ್ಲ.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ 2020–21 ನೇ ಸಾಲಿಗೆ ಪ್ರವೇಶಕ್ಕಾಗಿ ದುರ್ಬಲ ವರ್ಗಕ್ಕೆ ಸೇರಿದ ಮಕ್ಕಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಇದೇ 19 ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ ಮತ್ತು ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳ ಮಾಹಿತಿ ಪ್ರಕಟವಾಗಲಿದೆ.</p>.<p>ಇದೇ 26 ರಿಂದ ಏಪ್ರಿಲ್ 20 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಏ. 27 ರಂದು ಲಾಟರಿ ಮೂಲಕ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಮೇ 5 ರಿಂದ ದಾಖಲಾಗಿ ಪ್ರಕ್ರಿಯೆ ಆರಂಭವಾಗಲಿದೆ.</p>.<p>ಕಳೆದ ಸಾಲಿನಂತೆ ಈವರ್ಷವೂ ನೆರೆಹೊರೆ ಶಾಲೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಕೊನೆಯಲ್ಲಿ ಖಾಸಗಿ ಶಾಲೆಗಳ ಸೀಟು ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಮೇ 21 ರಂದು ಆನ್ಲೈನ್ನಲ್ಲಿ 2 ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದ್ದು, ಮೇ 22 ರಿಂದ 30 ರ ನಡುವೆ 2 ನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ನಡೆಯಲಿದೆ.</p>.<p><strong>ಬೆಂಗಳೂರಲ್ಲಿ 2 ವಾರ್ಡ್ಗಳಲ್ಲಿ ಆರ್ಟಿಇ:</strong> ಸರ್ಕಾರದ ಹೊಸ ನಿಯಮದಿಂದಾಗಿ ಕಳೆದ ವರ್ಷದಂತೆ ಈ ವರ್ಷವೂ ಬೆಂಗಳೂರಿನ್ 198 ವಾರ್ಡ್ಗಳ ಪೈಕಿ ಎರಡು ವಾರ್ಡ್ಗಳಲ್ಲಿ ಮಾತ್ರ (ಗಿರಿನಗರ, ಗಣೇಶ ಮಂದಿರ) ಆರ್ಟಿಇ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಗಳಿಗೆ ದಾಳಲಾಗುವ ಅವಕಾಶವಿದೆ. ಉಳಿದ ಕಡೆಗಳಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿಗಷ್ಟೇ ಸೇರಿಸಿಕೊಳ್ಳಬೇಕಾಗುತ್ತದೆ.</p>.<p>ರಾಜ್ಯದ ಇತರ ಕಡೆಗಳಲ್ಲೂ ಇದೇ ಪರಿಸ್ಥಿತಿ ಇದೆ. ಈ ಮೊದಲ ಲಭ್ಯವಿದ್ದ 1.52 ಲಕ್ಷ ಆರ್ಟಿಇ ಸೀಟುಗಳ ಬದಲಿಗದೆ ಇದೀಗ ಸೀಟುಗಳ ಸಂಖ್ಯೆ 17 ಸಾವಿರಕ್ಕೆ ಕುಸಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>