‘ಅರ್ಥಶಾಸ್ತ್ರ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಎಂಟು ಜಿಲ್ಲೆಗಳಿಗೆ ವಿಸ್ತರಿಸಲಾಗಿದ್ದು, ಮೌಲ್ಯಮಾಪನಈಗಾಗಲೇ ಆರಂಭವಾಗಿದೆ. ಇದು ಉತ್ತಮ ಬೆಳವಣಿಗೆ. ಶಿಕ್ಷಣ ಸಚಿವರು ತಿಳಿಸಿದಂತೆ ಭೌತವಿಜ್ಞಾನ, ರಸಾಯನವಿಜ್ಞಾನ, ಗಣಿತ, ಜೀವವಿಜ್ಞಾನ (ಪಿಸಿಎಂಬಿ) ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬೆಂಗಳೂರಿನಲ್ಲೇ ನಡೆಯಲಿದೆ. ಈ ಉತ್ತರ ಪತ್ರಿಕೆಗಳನ್ನು ವಿವಿಧ ಜಿಲ್ಲೆಗಳಿಗೆ ವಿಂಗಡಿಸಿ ಮೌಲ್ಯಮಾಪನ ಆಗುವಂತೆ ನೋಡಿಕೊಳ್ಳಬೇಕಿತ್ತು’ ಎಂದು ಅವರು ಹೇಳಿದರು.