ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ‘ಈ ಶಿಕ್ಷಕರು ಮತ್ತು ಉಪನ್ಯಾಸಕರು ಈಗಾಗಲೇ ಕೋವಿಡ್–19 ಸಂಬಂಧಿತ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಅವರು ವಿದ್ಯಾರ್ಥಿಗಳು ಮತ್ತು ಇತರ ಶಿಕ್ಷಕರ ಸಂಪರ್ಕಕ್ಕೆ ಬಂದಾಗ ಸೋಂಕು ಹರಡುವ ಅಪಾಯವೂ ಇದೆ. ಹೀಗಾಗಿ ತಕ್ಷಣ ಇವರನ್ನು ಕೋವಿಡ್ ಕರ್ತವ್ಯದಿಂದ ಮುಕ್ತಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.