ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಶಶಿ ತರೂರ್‌ಗೆ ಸಮನ್ಸ್

Last Updated 5 ಜೂನ್ 2018, 12:40 IST
ಅಕ್ಷರ ಗಾತ್ರ

ನವದೆಹಲಿ: ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದ ಆರೋಪಿಯಾದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ವಿಚಾರಣೆಗೊಳಪಡಿಸಲು ನ್ಯಾಯಾಲಯ ಸಮನ್ಸ್ ಕಳುಹಿಸಿದೆ. ಜೂನ್ ತಿಂಗಳು 7ರಂದು ವಿಚಾರಣೆಗೆ ಹಾಜರಾಗಬೇಕೆಂದು ದೆಹಲಿ ನ್ಯಾಯಾಲಯ ಆದೇಶಿಸಿದೆ.

ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ಅವರು ತಮ್ಮ ಹೆಂಡತಿ ಸುನಂದಾ ಪುಷ್ಕರ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಸುನಂದಾ ಸಾವಿನ ಪ್ರಕರಣದಲ್ಲಿ ತರೂರ್‌ ಅವರೊಬ್ಬರೇ ಆರೋಪಿಯಾಗಿದ್ದಾರೆ.

ತರೂರ್‌ ಅವರು ತಮ್ಮ ಹೆಂಡತಿಯನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಿದ್ದರು. ತರೂರ್‌ ಅವರನ್ನು ಆರೋಪಿಯಾಗಿ ಕರೆಸಿ ವಿಚಾರಣೆಗೆ ಒಳಪಡಿಸಬೇಕು ಎಂದೂ ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಆರೋಪಪಟ್ಟಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪುಟಗಳಿವೆ.

ದೆಹಲಿಯ ಪಂಚತಾರಾ ಹೋಟೆಲೊಂದರಲ್ಲಿ 2014ರ ಜನವರಿ 17ರಂದು ಸುನಂದಾ ಮೃತಪಟ್ಟಿದ್ದರು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 498 ಎ (ಗಂಡ ಅಥವಾ ಆತನ ಸಂಬಂಧಿಕರು ಮಹಿಳೆಯನ್ನು ಕ್ರೂರವಾಗಿ ನಡೆಸಿಕೊಳ್ಳುವುದು) ಮತ್ತು 306 (ಆತ್ಮಹತ್ಯೆಗೆ ಕುಮ್ಮಕ್ಕು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ತರೂರ್‌ ಅವರನ್ನು ಮದುವೆಯಾಗಿ ಮೂರು ವರ್ಷ ಮೂರು ತಿಂಗಳಲ್ಲಿ ಸುನಂದಾ ಅವರು ಮೃತಪಟ್ಟಿದ್ದಾರೆ. 2010ರ ಆಗಸ್ಟ್‌ 22ರಂದು ಅವರ ಮದುವೆ ನಡೆದಿತ್ತು.

ಲಭ್ಯವಿರುವ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿ ಪರಿಶೀಲಿಸಲಾಗಿದೆ. ತರೂರ್‌ ಅವರನ್ನು ಕಸ್ಟಡಿಯಲ್ಲಿ ವಿಚಾರಣೆಗೆ ಒಳಪಡಿಸಬೇಕಾದ ಅಗತ್ಯ ಇದೆ ಎಂಬುದು ಇದರಿಂದ ಕಂಡು ಬಂದಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ತರೂರ್‌ ಅವರನ್ನು ಈವರೆಗೆ ಬಂಧಿಸಲಾಗಿಲ್ಲ. ತನಿಖೆಗೆ ಅಗತ್ಯ ಇದ್ದಾಗಲೆಲ್ಲ ಅವರು ಹಾಜರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT