‘ಸುಮಾರು 70 ಮನೆಗಳು ಇಲ್ಲಿವೆ. 300 ಜನ ಇಲ್ಲಿ ವಾಸ ಮಾಡುತ್ತಿದ್ದೇವೆ. ಎರಡು ತಿಂಗಳ ಹಿಂದೆ, ಮನೆಗಳಿಗೆ ಬರುವ ನೀರಿನ ಮುಖ್ಯ ಕೊಳವೆ ಒಡೆದು ಹೋಗಿತ್ತು. ಅಲ್ಲಿಂದ ಇಲ್ಲಿಯ ತನಕ ಒಡೆದ ಕೊಳವೆಯನ್ನು ಗ್ರಾಮ ಪಂಚಾಯಿತಿಯವರು ಸರಿಪಡಿಸದೇ ಪ್ರತಿ ದಿನ ಒಂದೊಂದು ಕಾರಣವನ್ನು ನೀಡುತ್ತಿದ್ದಾರೆ. ಒಡೆದ ಕೊಳವೆಯನ್ನು ದುರಸ್ತಿ ಮಾಡಿಸದೇ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ’ ಎಂದು ಬಡಾವಣೆಯ ನಿವಾಸಿ ಕಿಟ್ಟಿ ಆಕ್ರೋಶ ವ್ಯಕ್ತಪಡಿಸಿದರು.