<p><strong>ಬೆಂಗಳೂರು:</strong>ಬಹುನಿರೀಕ್ಷೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಗುರುವಾರ ಬೆಳಿಗ್ಗೆ ರಾಜ್ಯದ 2,879 ಕೇಂದ್ರಗಳಲ್ಲಿ ಉತ್ಸಾಹದಿಂದಲೇ ಆರಂಭವಾಗಿದೆ.</p>.<p>ಬೆಳಿಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ಮುಖಗವಸು ತೊಟ್ಟು ಪರೀಕ್ಷಾ ಕೇಂದ್ರಗಳಿಗೆ ಬರತೊಡಗಿದ್ದರು. ಅಂತರ ಕಾಯ್ದುಕೊಳ್ಳಲು ಬಹುತೇಕ ಎಲ್ಲ ಕಡೆ ಕಟ್ಟು ನಿಟ್ಟಿನ ವ್ಯವಸ್ಥೆ ಮಾಡಲಾಗಿತ್ತು. ಧ್ವನಿವರ್ಧಕ ಮೂಲಕ ವಿದ್ಯಾರ್ಥಿ ಗಳಿಗೆ ಮನವರಿಕೆ ಮಾಡಲಾಯಿತು.</p>.<p>ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ನಗರದ ರಾಜಾಜಿನಗರದ ಕೆಲವು ಪರೀಕ್ಷಾ ಕೇಂದ್ರಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಶುಭಾಶಯ ಹೇಳಿದರು.</p>.<p>ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಗೆ ಆರೋಗ್ಯ ಕಾರ್ಯಕರ್ತ ರು ಅಥವಾ ಆಶಾ ಕಾರ್ಯಕರ್ತರು ಇದ್ದುದು ಕಂಡುಬಂತು. ಸ್ಕೌಟ್ ವಿದ್ಯಾರ್ಥಿಗಳು ಸಹ ಲವಲವಿಕೆಯಿಂದ ಸೇವೆ ಸಲ್ಲಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/tumakuru/student-from-quarantine-center-to-district-hospital-739514.html" target="_blank">ಶಿರಾ | ಪರೀಕ್ಷೆ ಬರೆಯಲು ಬಂದ ಕ್ವಾರಂಟೈನ್ನಲ್ಲಿದ್ದ ವಿದ್ಯಾರ್ಥಿ ಆಸ್ಪತ್ರೆಗೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬಹುನಿರೀಕ್ಷೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಗುರುವಾರ ಬೆಳಿಗ್ಗೆ ರಾಜ್ಯದ 2,879 ಕೇಂದ್ರಗಳಲ್ಲಿ ಉತ್ಸಾಹದಿಂದಲೇ ಆರಂಭವಾಗಿದೆ.</p>.<p>ಬೆಳಿಗ್ಗೆ 8 ಗಂಟೆಯಿಂದಲೇ ವಿದ್ಯಾರ್ಥಿಗಳು ಮುಖಗವಸು ತೊಟ್ಟು ಪರೀಕ್ಷಾ ಕೇಂದ್ರಗಳಿಗೆ ಬರತೊಡಗಿದ್ದರು. ಅಂತರ ಕಾಯ್ದುಕೊಳ್ಳಲು ಬಹುತೇಕ ಎಲ್ಲ ಕಡೆ ಕಟ್ಟು ನಿಟ್ಟಿನ ವ್ಯವಸ್ಥೆ ಮಾಡಲಾಗಿತ್ತು. ಧ್ವನಿವರ್ಧಕ ಮೂಲಕ ವಿದ್ಯಾರ್ಥಿ ಗಳಿಗೆ ಮನವರಿಕೆ ಮಾಡಲಾಯಿತು.</p>.<p>ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ನಗರದ ರಾಜಾಜಿನಗರದ ಕೆಲವು ಪರೀಕ್ಷಾ ಕೇಂದ್ರಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಮಾತನಾಡಿಸಿ ಶುಭಾಶಯ ಹೇಳಿದರು.</p>.<p>ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆಗೆ ಆರೋಗ್ಯ ಕಾರ್ಯಕರ್ತ ರು ಅಥವಾ ಆಶಾ ಕಾರ್ಯಕರ್ತರು ಇದ್ದುದು ಕಂಡುಬಂತು. ಸ್ಕೌಟ್ ವಿದ್ಯಾರ್ಥಿಗಳು ಸಹ ಲವಲವಿಕೆಯಿಂದ ಸೇವೆ ಸಲ್ಲಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/tumakuru/student-from-quarantine-center-to-district-hospital-739514.html" target="_blank">ಶಿರಾ | ಪರೀಕ್ಷೆ ಬರೆಯಲು ಬಂದ ಕ್ವಾರಂಟೈನ್ನಲ್ಲಿದ್ದ ವಿದ್ಯಾರ್ಥಿ ಆಸ್ಪತ್ರೆಗೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>