ಈ ಬಗ್ಗೆ ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಪತ್ರ ಬರೆದಿರುವ ಅವರು, ‘ಮೌಲ್ಯಮಾಪನಕ್ಕೆ ಹಾಜರಾತಿ ಕಡ್ಡಾಯವಲ್ಲ ಎಂದು ಹೇಳುತ್ತಲೇ ಡಿಡಿಪಿಯುಗಳಿಂದ ಫೋನ್ ಕರೆ ಮಾಡಿಸಿ, ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗುತ್ತಿದೆ. ಸೂಕ್ತ ಸಾರಿಗೆ, ವಸತಿ ಇಲ್ಲದ ಈ ಸ್ಥಿತಿಯಲ್ಲಿ ಹೊರ ಜಿಲ್ಲೆಗಳಿಂದ ಬಂದು ಮೌಲ್ಯಮಾಪನ ಮಾಡುವುದು ಸಾಧ್ಯವೇ ಇಲ್ಲ. ಸರ್ಕಾರ ತನ್ನ ಹಟವನ್ನೇ ಮುಂದುವರಿಸಿದರೆ ಉಪನ್ಯಾಸಕರ ಸಂಘದೊಂದಿಗೆ ಚರ್ಚಿಸಿ ರಾಜ್ಯದಾದ್ಯಂತ ಮೌಲ್ಯಮಾಪನ ಬಹಿಷ್ಕಾರ ಮಾಡಬೇಕಾಗುತ್ತದೆ’ ಎಂದು ಹೇಳಿದ್ದಾರೆ.