ಮೈಸೂರಿನಲ್ಲಿ ನಡೆದಿದ್ದ ‘ಜನರಾಜಕಾರಣ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಸಿದ್ದರಾಮಯ್ಯ ಪರ ಮತಯಾಚಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಅಧಿಕಾರಿಗಳು ಮೈಸೂರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿದ್ದರು. ಮೈಸೂರು ವಿ.ವಿ ಕುಲಸಚಿವೆ ಡಿ.ಭಾರತಿ ನೋಟಿಸ್ ನೀಡಿದ್ದಾರೆ.