ಬೆಂಗಳೂರು: ಹಲವು ಅಡೆತಡೆಗಳ ಬಳಿಕವೂ ಬಿಜೆಪಿ ಸರ್ಕಾರ ರಚಿಸುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಲು ರಾಜಭವನದಲ್ಲಿ ಸಲಕ ಸಿದ್ಧತೆ ಮಾಡಲಾಗಿದೆ.
ವೇದಿಕೆಯನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಗಣ್ಯರಿಗೆ ವೇದಿಕೆ ಮುಂಭಾಗ ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಮುಖಂಡರು ಮತ್ತು ಶಾಸಕರು ರಾಜಭವನಕ್ಕೆ ಪ್ರವೇಶಿಸುತ್ತಿದ್ದಾರೆ.
ಹೆಚ್ಚಿನ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಪೊಲೀಸರು ಎಲ್ಲರನ್ನೂ ತಪಾಸಣೆ ನಡೆಸಿ ಒಳಗೆ ಬಿಡುತ್ತಿದ್ದಾರೆ.
\
ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭಕ್ಕೆ ಬಂದ ಬಿಜೆಪಿ ಮುಖಂಡರು.