ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರಿಗೆ ನೋಟಿಸ್‌

Last Updated 4 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಕುಷ್ಟಗಿ (ಕೊಪ್ಪಳ ಜಿಲ್ಲೆ): ಕುಷ್ಟಗಿ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ಅಭಿಮಾನಿಗಳು ಫೇಸ್‌ಬುಕ್‌ನಲ್ಲಿ ಚಿತ್ರನಟರಾದ ಗಣೇಶ್‌ ಹಾಗೂ ಸುದೀಪ್‌ ಅವರ ಭಾವಚಿತ್ರ ಬಳಸಿಕೊಂಡು ಚುನಾವಣಾ ಪ್ರಚಾರ ನಡೆಸುತ್ತಿದ್ದು, ಈ ಸಂಬಂಧ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಚುನಾವಣಾಧಿಕಾರಿ ನೋಟಿಸ್‌ ನೀಡಿದ್ದಾರೆ.

‘24 ಗಂಟೆ ಒಳಗಾಗಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಚುನಾವಣಾ ಆಯೋಗದ ಆದೇಶದಂತೆ ಪ್ರಕರಣ ದಾಖಲಿಸಲಾಗುವುದು’ ಎಂದು ಚುನಾವಣಾಧಿಕಾರಿ ಪ್ರಶಾಂತ್‌ ಅವರು ಬುಧವಾರ ಇಬ್ಬರಿಗೂ ಪ್ರತ್ಯೇಕವಾಗಿ ನೀಡಿರುವ ನೋಟಿಸ್‌ನಲ್ಲಿ ತಿಳಿಸಿದ್ದಾರೆ.

‘ಅನುಮತಿ ಇಲ್ಲದೆ ಚಲನಚಿತ್ರ ನಟರ ಭಾವಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಆದರೆ, ನಟರಿಗೆ ಇದರ ಯಾವುದೇ ಮಾಹಿತಿ ಇರುವುದಿಲ್ಲ. ನೋಟಿಸ್‌ಗೆ ಉತ್ತರ ಬಂದ ನಂತರ ಕ್ರಮ ಜರುಗಿಸಲಾಗುವುದು’ ಎಂದು ಚುನಾವಣಾಧಿಕಾರಿ ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT