ಕುಷ್ಟಗಿ (ಕೊಪ್ಪಳ ಜಿಲ್ಲೆ): ಕುಷ್ಟಗಿ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಅಭಿಮಾನಿಗಳು ಫೇಸ್ಬುಕ್ನಲ್ಲಿ ಚಿತ್ರನಟರಾದ ಗಣೇಶ್ ಹಾಗೂ ಸುದೀಪ್ ಅವರ ಭಾವಚಿತ್ರ ಬಳಸಿಕೊಂಡು ಚುನಾವಣಾ ಪ್ರಚಾರ ನಡೆಸುತ್ತಿದ್ದು, ಈ ಸಂಬಂಧ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರಿಗೆ ಚುನಾವಣಾಧಿಕಾರಿ ನೋಟಿಸ್ ನೀಡಿದ್ದಾರೆ.