ದಾವಣಗೆರೆಯಲ್ಲಿ ಲೋಕಸಾಭಾ ಚುನಾವಣೆಯ ಮತದಾನ ಜಾಗೃತಿ ಅಂಗವಾಗಿ ಎವಿಕೆ ಕಾಲೇಜು ರಸ್ತೆಯಲ್ಲಿ ಮಂಗಳವಾರ ಜೆಎಚ್ ಪಟೇಲ್ ಕಾಲೇಜು ಹಾಗೂ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದಿಂದ 100 ಮೀಟರ್ ಕಾಟನ್ ಬಟ್ಟೆಯ ಮೇಲೆ ಚಿತ್ರಕಲಾ ಶಿಕ್ಷಕರು ಮತದಾನ ಜಾಗೃತಿ ಚಿತ್ರಗಳನ್ನು ಬರೆದರು. ಚಿತ್ರ: ಅನೂಪ್ ಆರ್. ತಿಪ್ಪೇಸ್ವಾಮಿ.
ADVERTISEMENT
ಬಾಲಟಿ ಕಲಾವಿದ ಬಸವರಾಜು ಎಸ್. ಗೌಡ ಅವರು ಬಾಟಲಿಯಲ್ಲಿ ರಾಷ್ಟ್ರೀಯ ಪಕ್ಷಗಳ ಚಿನ್ಹೆಗಳನ್ನು ಬೆಂಗಳೂರಿನ ಪ್ರಸ್ ಕ್ಲಬ್ ಆವರಣದಲ್ಲಿ ಮಂಗಳವಾರ ಪ್ರದರ್ಶಿಸುವ ಮೂಲಕ ಮತದಾನ ಜಾಗೃತಿ ನಡೆಸಿದರು. -ಪ್ರಜಾವಾಣಿ ಚಿತ್ರ
ಜೆಡಿಎಸ್್ ರಾಷ್ಟ್ರೀಯ ನಾಯಕ ಎಚ್.ಡಿ. ದೇವೇಗೌಡ ಅವರು ಮೈಸೂರಿನ ಮಂಚೇಗೌಡನ ಕೊಪ್ಪದಲ್ಲಿ ಮಂಗಳವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದರು. -ಪ್ರಜಾವಾಣಿ ಚಿತ್ರ
ಜೆಡಿಎಸ್ ರಾಷ್ಟ್ರೀಯ ನಾಯಕ ಎಚ್.ಡಿ. ದೇವೇಗೌಡ ಅವರು ಮೈಸೂರಿನಲ್ಲಿ ಮಂಗಳವಾರ ಲೋಕಸಭಾ ಚುನಾವಣಾ ಪ್ರಚಾರ ನಡೆಸಿದರು. -ಪ್ರಜಾವಾಣಿ ಚಿತ್ರ
ಮಂಗಳೂರಿನ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಬಿ. ಜನಾರ್ದನ ಪೂಜಾರಿ ಅವರ ಪರ ನಡೆಸಿದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಬಾಲಕನೊಬ್ಬ ಹೆಜ್ಜೆ ಹಾಕಿದ ಪರಿ ಇದು. -ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ಮಂಗಳವಾರ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. -ಪ್ರಜಾವಾಣಿ ಚಿತ್ರ
ಹುಬ್ಬಳ್ಳಿಯಲ್ಲಿ ಮಂಗಳವಾರ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಪರ ನಡೆದ ಪ್ರಚಾರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. -ಪ್ರಜಾವಾಣಿ ಚಿತ್ರ