<p><strong>ನವದೆಹಲಿ:</strong> ‘ಬಿಜೆಪಿಯು ಶಾಸಕರ ಖರೀದಿಯಲ್ಲಿ ತೊಡಗಿದ್ದು, ನಮ್ಮ ಪಕ್ಷದ ಏಳು ಮಂದಿ ಶಾಸಕರಿಗೆ ತಲಾ ₹ 10 ಕೋಟಿಯ ಆಮಿಷ ಒಡ್ಡಿದೆ’ ಎಂದು ಎಎಪಿ ಮುಖಂಡ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಬುಧವಾರ ಆರೋಪಿಸಿದ್ದಾರೆ.</p>.<p>‘ಅಭಿವೃದ್ಧಿಯ ವಿಚಾರದಲ್ಲಿ ಜನರ ಮುಂದೆ ಹೇಳಿಕೊಳ್ಳಲು ಬಿಜೆಪಿಗೆ ವಿಷಯಗಳಿಲ್ಲದಿರುವುದರಿಂದ ಆ ಪಕ್ಷವು ಶಾಸಕರ ಖರೀದಿಗೆ ಕೈಹಾಕಿದೆ. ಈ ಹಿಂದೆಯೂ ಬಿಜೆಪಿ ಇಂಥ ಪ್ರಯತ್ನ ಮಾಡಿತ್ತು. ಆದರೆ ಆಗ ಜನರೇ ಆ ಪಕ್ಷಕ್ಕೆ ಸರಿಯಾದ ಉತ್ತರ ಕೊಟ್ಟಿದ್ದರು. ದೆಹಲಿಯ ಜನರು ಈ ಬಾರಿಯೂ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಹೇಳಿದರು.</p>.<p>‘ಸಿಸೋಡಿಯ ಅವರ ಆರೋಪವು ವಿಲಕ್ಷಣವಾದುದು ಮತ್ತು ಜನರ ಗಮನವನ್ನು ಸೆಳೆಯಲು ಮಾಡಿದ ವ್ಯರ್ಥ ಪ್ರಯತ್ನ’ ಎಂದು ಬಿಜೆಪಿ ಮುಖಂಡ ಅಶೋಕ್ ಗೋಯಲ್ ಬಣ್ಣಿಸಿದ್ದಾರೆ.</p>.<p>ಪಕ್ಷದೊಳಗೆ ಎದ್ದಿರುವ ಭಿನ್ನಮತವನ್ನು ನಿಯಂತ್ರಿಸಲು ಅರವಿಂದ ಕೇಜ್ರಿವಾಲ್ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಿಜೆಪಿಯು ಶಾಸಕರ ಖರೀದಿಯಲ್ಲಿ ತೊಡಗಿದ್ದು, ನಮ್ಮ ಪಕ್ಷದ ಏಳು ಮಂದಿ ಶಾಸಕರಿಗೆ ತಲಾ ₹ 10 ಕೋಟಿಯ ಆಮಿಷ ಒಡ್ಡಿದೆ’ ಎಂದು ಎಎಪಿ ಮುಖಂಡ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಬುಧವಾರ ಆರೋಪಿಸಿದ್ದಾರೆ.</p>.<p>‘ಅಭಿವೃದ್ಧಿಯ ವಿಚಾರದಲ್ಲಿ ಜನರ ಮುಂದೆ ಹೇಳಿಕೊಳ್ಳಲು ಬಿಜೆಪಿಗೆ ವಿಷಯಗಳಿಲ್ಲದಿರುವುದರಿಂದ ಆ ಪಕ್ಷವು ಶಾಸಕರ ಖರೀದಿಗೆ ಕೈಹಾಕಿದೆ. ಈ ಹಿಂದೆಯೂ ಬಿಜೆಪಿ ಇಂಥ ಪ್ರಯತ್ನ ಮಾಡಿತ್ತು. ಆದರೆ ಆಗ ಜನರೇ ಆ ಪಕ್ಷಕ್ಕೆ ಸರಿಯಾದ ಉತ್ತರ ಕೊಟ್ಟಿದ್ದರು. ದೆಹಲಿಯ ಜನರು ಈ ಬಾರಿಯೂ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಹೇಳಿದರು.</p>.<p>‘ಸಿಸೋಡಿಯ ಅವರ ಆರೋಪವು ವಿಲಕ್ಷಣವಾದುದು ಮತ್ತು ಜನರ ಗಮನವನ್ನು ಸೆಳೆಯಲು ಮಾಡಿದ ವ್ಯರ್ಥ ಪ್ರಯತ್ನ’ ಎಂದು ಬಿಜೆಪಿ ಮುಖಂಡ ಅಶೋಕ್ ಗೋಯಲ್ ಬಣ್ಣಿಸಿದ್ದಾರೆ.</p>.<p>ಪಕ್ಷದೊಳಗೆ ಎದ್ದಿರುವ ಭಿನ್ನಮತವನ್ನು ನಿಯಂತ್ರಿಸಲು ಅರವಿಂದ ಕೇಜ್ರಿವಾಲ್ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>