ಲಕ್ಷ್ಮೀನಾರಾಯಣ್ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷಕ್ಕೆ ಬರ ಮಾಡಿಕೊಂಡರು. ವಿವಿಧ ವಾರ್ಡ್ಗಳ ಬಿಜೆಪಿ ಘಟಕಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರೂ ಸೇರಿ ನೂರಕ್ಕೂ ಹೆಚ್ಚು ಬೆಂಬಲಿಗರೂ ಕಾಂಗ್ರೆಸ್ ಸೇರಿದರು. ಶಾಸಕರಾದ ರಾಮಲಿಂಗಾರೆಡ್ಡಿ, ಎಂ. ಕೃಷ್ಣಪ್ಪ, ದಕ್ಷಿಣದ ಕ್ಷೇತ್ರದ ಅಭ್ಯರ್ಥಿ ಬಿ.ಕೆ. ಹರಿಪ್ರಸಾದ್ ಈ ವೇಳೆ ಇದ್ದರು.