‘ಅನಂತ ಕುಮಾರ್ ಹೆಗಡೆ ಜಿಲ್ಲೆಗೆ ಕೈಗಾರಿಕೆ ತರಲಿಲ್ಲ ಎಂದು ಹೇಳುವ ಆನಂದ ಅಸ್ನೋಟಿಕರ್ ಅವರ ಕುಟುಂಬ ಎಷ್ಟು ಉದ್ಯೋಗ ಸೃಷ್ಟಿ ಮಾಡಿದೆ? 23 ವರ್ಷಗಳ ಅಧಿಕಾರದ ಅವಧಿಯಲ್ಲಿ ಶಾಸಕರಾಗಿ, ವಿಧಾನಪರಿಷತ್ ಸದಸ್ಯರಾಗಿ, ಸಚಿವರಾಗಿ, ಕಾರವಾರ ಕ್ಷೇತ್ರಕ್ಕೆ ಎಷ್ಟು ಕೈಗಾರಿಕೆಗಳನ್ನು ತಂದಿದ್ದಾರೆ? ಎಷ್ಟು ಉದ್ಯೋಗ ಸೃಷ್ಟಿಯಾಗಿದೆ, ದಲಿತ, ಹಿಂದುಳಿದವರು ಎಷ್ಟು ಲಾಭ ಪಡೆದಿದ್ದಾರೆ ಎಂಬುದಕ್ಕೆ ಅವರು ಉತ್ತರಿಸಲಿ. ನಂತರ ಎರಡನೇ ಆರೋಪ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.