ತೆರೆದ ವಾಹನದಲ್ಲಿ ಶೋ ನಡೆಸಿದ ಶಾ ಅವರು ‘ಮೋದಿ ಹವಾ’ ಎಬ್ಬಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಅಭ್ಯರ್ಥಿ ಅಶ್ವತ್ಥನಾರಾಯಣ ಮತ್ತು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ. ಶಾಸಕರಾದ ವಿ. ಸೋಮಣ್ಣ, ಆರ್. ಅಶೋಕ, ಉದಯ ಗರುಡಾಚಾರ್ ಸೇರಿದಂತೆ ಪ್ರಮುಖರು ಇದ್ದರು. ರೋಡ್ ಶೋ ಕಾರಣಕ್ಕೆ ನಗರ ಪೂರ್ಣ ಕೇಸರಿಮಯವಾಗಿತ್ತು. ಮೆರವಣಿಗೆ ಉದ್ದಕ್ಕೂ ಬಿಜೆಪಿ ಕಾರ್ಯಕರ್ತರು ‘ಮೋದಿ... ಮೋದಿ...’ ಎಂಬ ಘೋಷಣೆಗಳನ್ನು ಮೊಳಗಿಸಿದರು. ಇದರ ಜತೆ ‘ಮತ್ತೊಮ್ಮೆ ಮೋದಿ’ ಎಂಬ ಘೋಷ ವಾಕ್ಯ ಮೊಳಗಿಸುವ ಮೂಲಕ ಜನರಲ್ಲಿ ಹುರುಪು ತುಂಬಿದರು. ಬಿಜೆಪಿ ಗೆಲ್ಲಿಸುವಂತೆ ಶೋ ಉದ್ದಕ್ಕೂ ಅಮಿತ್ ಶಾ ಜನರಲ್ಲಿ ಮನವಿ ಮಾಡಿದರು. ಪಕ್ಷದ ಪರವಾಗಿ ಘೋಷಣೆ ಕೂಗಿ, ಜಯಘೋಷ ಮೊಳಗುವಂತೆ ಮಾಡಿದರು.