ನೀವು ಅಧಿಕಾರದಲ್ಲಿದ್ದಾಗ ಮುಸ್ಲಿಮರ ಶೇ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದ್ದೀರಿ. ಈ ವಿಷಯ ರಾಷ್ಟ್ರವ್ಯಾಪಿ ಚರ್ಚೆಯಾಗುತ್ತಿದೆಯಲ್ಲ?
ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಮುಸ್ಲಿಂ ಸಮುದಾಯದಲ್ಲಿರುವ ಪಿಂಜಾರ ನದಾಫ ಸೇರಿದಂತೆ 24 ಜಾತಿಗಳು ಈಗಾಗಲೇ ‘2ಎ’ ನಲ್ಲಿವೆ. ಬಡ ಮುಸ್ಲಿಮರ ಮೀಸಲಾತಿಯನ್ನು ನಾವು ತೆಗೆದಿಲ್ಲ. ಜಾತಿ ಆಧಾರಿತ ಮೀಸಲಾತಿ ಈಗಾಗಲೇ ಕರ್ನಾಟಕದಲ್ಲಿದೆ. ಧರ್ಮ ಆಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಇದರಿಂದ ದೇಶದಲ್ಲಿ ದೊಡ್ಡ ಅನಾಹುತವಾಗುತ್ತದೆ ಅಂತ ಅಂಬೇಡ್ಕರ್ ಅವರೇ ಹೇಳಿದ್ದರು. ಆಂಧ್ರದಲ್ಲಿ ಎರಡು ಮೂರು ಬಾರಿ ಮಾಡಿದ್ದ ಪ್ರಯೋಗಗಳನ್ನು ನ್ಯಾಯಾಲಯ ರದ್ದುಪಡಿಸಿದೆ.