<p>ಕೇರಳದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಲ್ಲೊಂದಾದ ಆಟ್ಟಿಂಗಲ್ ಈ ಬಾರಿ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಕಳೆದ ಬಾರಿ ಇಲ್ಲಿಂದ ಗೆದ್ದಿದ್ದ ಅಡೂರ್ ಪ್ರಕಾಶ್ ಅವರನ್ನೇ ಕಾಂಗ್ರೆಸ್ ಪಕ್ಷವು ಈ ಸಲವೂ ಕಣಕ್ಕಿಳಿಸಿದೆ. ಶಾಸಕ ವಿ. ಜಾಯ್ ಅವರು ಆಡಳಿತಾರೂಢ ಸಿಪಿಎಂನ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಇವರಿಬ್ಬರಿಗೆ ಪೈಪೋಟಿ ನೀಡಲು ಬಿಜೆಪಿಯು ಕೇಂದ್ರ ಸಚಿವ ವಿ. ಮುರಳೀಧರನ್ ಅವರನ್ನು ಸ್ಪರ್ಧಿಯಾಗಿಸಿದೆ.</p><p> ಸಿಪಿಎಂನ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಿಂದ ಕಳೆದ ಬಾರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದ ಪ್ರಕಾಶ್ ಅವರು, ಈ ಬಾರಿಯೂ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕ್ಷೇತ್ರವನ್ನು ಮರಳಿ ಪಕ್ಷದ ತೆಕ್ಕೆಗೆ ಸೇರಿಸಬೇಕೆಂದು ಸಿಪಿಎಂನ ಮುಖಂಡರು ಅವಿರತವಾಗಿ ಶ್ರಮಿಸುತ್ತಿದ್ದಾರೆ. </p><p>2019ರ ಚುನಾವಣೆಯಲ್ಲಿ ಪ್ರಕಾಶ್ ಅವರು 38,247 ಮತಗಳ ಅಂತರದಿಂದ ಸಿಪಿಎಂನ ಅನಿರುದ್ಧನ್ ಸಂಪತ್ ಅವರನ್ನು ಪರಾಭವಗೊಳಿಸಿದ್ದರು. ಅನಿರುದ್ಧನ್ ಅವರು ಈ ಮೊದಲು ಇಲ್ಲಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾಯ್ ಅವರು ವರ್ಕಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.</p><p> ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರ ಮುಂದಿರಿಸಿ, ಜಾಯ್ ಅವರು ಮತಯಾಚಿಸುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ವಿ. ಮುರಳೀಧರನ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಸಾಧನೆಗಳನ್ನು ಮುಖ್ಯ ಚುನಾವಣಾ ವಿಚಾರವಾಗಿಸಿ ಜನರ ಬಳಿಗೆ ತೆರಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೇರಳದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಲ್ಲೊಂದಾದ ಆಟ್ಟಿಂಗಲ್ ಈ ಬಾರಿ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಕಳೆದ ಬಾರಿ ಇಲ್ಲಿಂದ ಗೆದ್ದಿದ್ದ ಅಡೂರ್ ಪ್ರಕಾಶ್ ಅವರನ್ನೇ ಕಾಂಗ್ರೆಸ್ ಪಕ್ಷವು ಈ ಸಲವೂ ಕಣಕ್ಕಿಳಿಸಿದೆ. ಶಾಸಕ ವಿ. ಜಾಯ್ ಅವರು ಆಡಳಿತಾರೂಢ ಸಿಪಿಎಂನ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಇವರಿಬ್ಬರಿಗೆ ಪೈಪೋಟಿ ನೀಡಲು ಬಿಜೆಪಿಯು ಕೇಂದ್ರ ಸಚಿವ ವಿ. ಮುರಳೀಧರನ್ ಅವರನ್ನು ಸ್ಪರ್ಧಿಯಾಗಿಸಿದೆ.</p><p> ಸಿಪಿಎಂನ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಿಂದ ಕಳೆದ ಬಾರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದ ಪ್ರಕಾಶ್ ಅವರು, ಈ ಬಾರಿಯೂ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕ್ಷೇತ್ರವನ್ನು ಮರಳಿ ಪಕ್ಷದ ತೆಕ್ಕೆಗೆ ಸೇರಿಸಬೇಕೆಂದು ಸಿಪಿಎಂನ ಮುಖಂಡರು ಅವಿರತವಾಗಿ ಶ್ರಮಿಸುತ್ತಿದ್ದಾರೆ. </p><p>2019ರ ಚುನಾವಣೆಯಲ್ಲಿ ಪ್ರಕಾಶ್ ಅವರು 38,247 ಮತಗಳ ಅಂತರದಿಂದ ಸಿಪಿಎಂನ ಅನಿರುದ್ಧನ್ ಸಂಪತ್ ಅವರನ್ನು ಪರಾಭವಗೊಳಿಸಿದ್ದರು. ಅನಿರುದ್ಧನ್ ಅವರು ಈ ಮೊದಲು ಇಲ್ಲಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಾಯ್ ಅವರು ವರ್ಕಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.</p><p> ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರ ಮುಂದಿರಿಸಿ, ಜಾಯ್ ಅವರು ಮತಯಾಚಿಸುತ್ತಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ವಿ. ಮುರಳೀಧರನ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಸಾಧನೆಗಳನ್ನು ಮುಖ್ಯ ಚುನಾವಣಾ ವಿಚಾರವಾಗಿಸಿ ಜನರ ಬಳಿಗೆ ತೆರಳುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>