<p>ಪಶ್ಚಿಮ ಬಂಗಾಳದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ದಾರ್ಜಿಲಿಂಗ್ ಲೋಕಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಅಣಿಯಾಗಿದೆ. </p><p>ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ಗೋಪಾಲ್ ಲಾಮಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ಕಳೆದ ಬಾರಿ ಇಲ್ಲಿಂದ ಗೆದ್ದಿದ್ದ ರಾಜು ಬಿಸ್ತಾ ಅವರನ್ನು ಪ್ರತಿಸ್ಪರ್ಧಿಯಾಗಿಸಿದೆ. ಕಾಂಗ್ರೆಸ್, ಮುನೀಷ್ ತಮಾಂಗ್ ಅವರನ್ನು ಅಖಾಡಕ್ಕಿಳಿಸಿದೆ. </p><p>ಮುನೀಷ್ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಗೋರ್ಖಾ ಮುಖಂಡ ಬಿನೋಯ್ ತಮಾಂಗ್ ಅವರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರು. ಬಳಿಕ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ರಾಜು ಬಿಸ್ತಾ ಅವರು ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿಯೂ ಕಾರ್ಯನಿರ್ವಹಿಸಿದವರು. 2019ರ ಚುನಾವಣೆಯಲ್ಲಿ ಇವರು 4,13,443 ಮತಗಳ ಅಂತರದಿಂದ ತೃಣಮೂಲ ಕಾಂಗ್ರೆಸ್ನ ಅಮರ್ ಸಿಂಗ್ ರಾಯ್ ಅವರನ್ನು ಪರಾಭವಗೊಳಿಸಿದ್ದರು. </p><p>2009 ರಿಂದಲೂ ಈ ಕ್ಷೇತ್ರ ಬಿಜೆಪಿಯ ಹಿಡಿತದಲ್ಲಿದೆ. ಭಾರತೀಯ ಗೋರ್ಖಾ ಪರಿಸಂಘ್ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಮುನೀಷ್ ಅವರು, ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ. ಇವರು ಈಚೆಗೆ ಕಾಂಗ್ರೆಸ್ ಸೇರಿದ್ದರು. ಗೋಪಾಲ್ ಲಾಮಾ ಅವರು, ದಾರ್ಜಿಲಿಂಗ್ನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿ ಬಳಿಕ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಶ್ಚಿಮ ಬಂಗಾಳದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ದಾರ್ಜಿಲಿಂಗ್ ಲೋಕಸಭಾ ಕ್ಷೇತ್ರವು ಈ ಬಾರಿ ತ್ರಿಕೋನ ಸ್ಪರ್ಧೆಗೆ ಅಣಿಯಾಗಿದೆ. </p><p>ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ಗೋಪಾಲ್ ಲಾಮಾ ಅವರನ್ನು ಕಣಕ್ಕಿಳಿಸಿದರೆ, ಬಿಜೆಪಿಯು ಕಳೆದ ಬಾರಿ ಇಲ್ಲಿಂದ ಗೆದ್ದಿದ್ದ ರಾಜು ಬಿಸ್ತಾ ಅವರನ್ನು ಪ್ರತಿಸ್ಪರ್ಧಿಯಾಗಿಸಿದೆ. ಕಾಂಗ್ರೆಸ್, ಮುನೀಷ್ ತಮಾಂಗ್ ಅವರನ್ನು ಅಖಾಡಕ್ಕಿಳಿಸಿದೆ. </p><p>ಮುನೀಷ್ ಅವರಿಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಕಾಂಗ್ರೆಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಗೋರ್ಖಾ ಮುಖಂಡ ಬಿನೋಯ್ ತಮಾಂಗ್ ಅವರು ಬಿಜೆಪಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರು. ಬಳಿಕ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ರಾಜು ಬಿಸ್ತಾ ಅವರು ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿಯೂ ಕಾರ್ಯನಿರ್ವಹಿಸಿದವರು. 2019ರ ಚುನಾವಣೆಯಲ್ಲಿ ಇವರು 4,13,443 ಮತಗಳ ಅಂತರದಿಂದ ತೃಣಮೂಲ ಕಾಂಗ್ರೆಸ್ನ ಅಮರ್ ಸಿಂಗ್ ರಾಯ್ ಅವರನ್ನು ಪರಾಭವಗೊಳಿಸಿದ್ದರು. </p><p>2009 ರಿಂದಲೂ ಈ ಕ್ಷೇತ್ರ ಬಿಜೆಪಿಯ ಹಿಡಿತದಲ್ಲಿದೆ. ಭಾರತೀಯ ಗೋರ್ಖಾ ಪರಿಸಂಘ್ನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಮುನೀಷ್ ಅವರು, ಸ್ಥಳೀಯವಾಗಿಯೂ ಪ್ರಭಾವಿ ಮುಖಂಡರಾಗಿದ್ದಾರೆ. ಇವರು ಈಚೆಗೆ ಕಾಂಗ್ರೆಸ್ ಸೇರಿದ್ದರು. ಗೋಪಾಲ್ ಲಾಮಾ ಅವರು, ದಾರ್ಜಿಲಿಂಗ್ನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿ ಬಳಿಕ ರಾಜಕೀಯ ಕ್ಷೇತ್ರಕ್ಕೆ ಕಾಲಿರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>