<p>ಮಹಾರಾಷ್ಟ್ರದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ಉಸ್ಮಾನಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಏರಿಕೆಯಾಗಿದೆ. ಶಿವಸೇನಾ ಉದ್ಧವ್ ಠಾಕ್ರೆ ಬಣವು ಓಂಪ್ರಕಾಶ್ ರಾಜೆ ನಿಂಬಾಳ್ಕರ್ ಅವರನ್ನು ಅಭ್ಯರ್ಥಿಯಾಗಿಸಿದರೆ, ಎನ್ಸಿಪಿ ಅಜಿತ್ ಪವಾರ್ ಬಣವು ಅರ್ಚನಾ ಪಾಟೀಲ್ ಅವರನ್ನು ಅಖಾಡಕ್ಕಿಳಿಸಿದೆ.</p><p>ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಆಘಾಡಿ ಪಕ್ಷವು ಭಾವು ಸಾಹೇಬ್ ಅಂಧಾಲ್ಕರ್ ಅವರನ್ನು ಕಣಕ್ಕಿಳಿಸಿದೆ. ಎಐಎಂಐಎಂ ಕೂಡ ಸಿದ್ದೀಕ್ ಇಬ್ರಾಹಿಂ ಅವರನ್ನು ಅಭ್ಯರ್ಥಿಯಾಗಿಸಿದೆ.</p><p>2019ರ ಚುನಾವಣೆಯಲ್ಲಿ ಶಿವಸೇನಾದಿಂದ ಸ್ಪರ್ಧಿಸಿದ್ದ ಓಂಪ್ರಕಾಶ್ ರಾಜೆ ಅವರು, 1,27,566 ಮತಗಳ ಅಂತರದಿಂದ ಎನ್ಸಿಪಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಅರ್ಚನಾ ಪಾಟೀಲ್ ಅವರು ತುಳಜಾಪುರ ಕ್ಷೇತ್ರದ ಬಿಜೆಪಿ ಶಾಸಕ ರಾಣಾ ಜಗಜೀತ್ ಸಿನ್ಹಾ ಪಾಟೀಲ್ ಅವರ ಪತ್ನಿಯಾಗಿದ್ದಾರೆ.</p><p>ವಂಚಿತ್ ಬಹುಜನ ಆಘಾಡಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಯಾಗಿರುವ ಓಂಪ್ರಕಾಶ್ ಅವರ ಮತಗಳು ವಿಭಜನೆಯಾಗುವ ಸಾಧ್ಯತೆ ಇದೆ ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಸಲ ಎನ್ಸಿಪಿ ಮತ್ತು ಶಿವಸೇನಾ ಇಬ್ಭಾಗವಾಗಿರುವುದರಿಂದ ಮತದಾರರು ಯಾರ ಪರ ನಿಲ್ಲಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಹಾರಾಷ್ಟ್ರದ ಪ್ರತಿಷ್ಠಿತ ಕ್ಷೇತ್ರಗಳಲ್ಲೊಂದಾದ ಉಸ್ಮಾನಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಏರಿಕೆಯಾಗಿದೆ. ಶಿವಸೇನಾ ಉದ್ಧವ್ ಠಾಕ್ರೆ ಬಣವು ಓಂಪ್ರಕಾಶ್ ರಾಜೆ ನಿಂಬಾಳ್ಕರ್ ಅವರನ್ನು ಅಭ್ಯರ್ಥಿಯಾಗಿಸಿದರೆ, ಎನ್ಸಿಪಿ ಅಜಿತ್ ಪವಾರ್ ಬಣವು ಅರ್ಚನಾ ಪಾಟೀಲ್ ಅವರನ್ನು ಅಖಾಡಕ್ಕಿಳಿಸಿದೆ.</p><p>ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಆಘಾಡಿ ಪಕ್ಷವು ಭಾವು ಸಾಹೇಬ್ ಅಂಧಾಲ್ಕರ್ ಅವರನ್ನು ಕಣಕ್ಕಿಳಿಸಿದೆ. ಎಐಎಂಐಎಂ ಕೂಡ ಸಿದ್ದೀಕ್ ಇಬ್ರಾಹಿಂ ಅವರನ್ನು ಅಭ್ಯರ್ಥಿಯಾಗಿಸಿದೆ.</p><p>2019ರ ಚುನಾವಣೆಯಲ್ಲಿ ಶಿವಸೇನಾದಿಂದ ಸ್ಪರ್ಧಿಸಿದ್ದ ಓಂಪ್ರಕಾಶ್ ರಾಜೆ ಅವರು, 1,27,566 ಮತಗಳ ಅಂತರದಿಂದ ಎನ್ಸಿಪಿ ಅಭ್ಯರ್ಥಿಯನ್ನು ಸೋಲಿಸಿದ್ದರು. ಅರ್ಚನಾ ಪಾಟೀಲ್ ಅವರು ತುಳಜಾಪುರ ಕ್ಷೇತ್ರದ ಬಿಜೆಪಿ ಶಾಸಕ ರಾಣಾ ಜಗಜೀತ್ ಸಿನ್ಹಾ ಪಾಟೀಲ್ ಅವರ ಪತ್ನಿಯಾಗಿದ್ದಾರೆ.</p><p>ವಂಚಿತ್ ಬಹುಜನ ಆಘಾಡಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಯಾಗಿರುವ ಓಂಪ್ರಕಾಶ್ ಅವರ ಮತಗಳು ವಿಭಜನೆಯಾಗುವ ಸಾಧ್ಯತೆ ಇದೆ ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈ ಸಲ ಎನ್ಸಿಪಿ ಮತ್ತು ಶಿವಸೇನಾ ಇಬ್ಭಾಗವಾಗಿರುವುದರಿಂದ ಮತದಾರರು ಯಾರ ಪರ ನಿಲ್ಲಲಿದ್ದಾರೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>