ತುಮಕೂರು: ಬಡತನ, ನಿರುದ್ಯೋಗ, ಆಹಾರ ಭದ್ರತೆಯಂತಹ ವಿಚಾರಗಳು ಸಂಸತ್ತಿನಲ್ಲಿ ಚರ್ಚೆ ಆಗಬೇಕು ಎಂಬ ಉದ್ದೇಶದಿಂದ ಜನಪರ ಹೋರಾಟಗಾರರನ್ನು ಎಡಪಕ್ಷಗಳು ಲೋಕಸಭಾ ಚುನಾವಣಾ ಕಣಕ್ಕೆ ಇಳಿಸಿವೆ. ಕಾರ್ಮಿಕರು, ರೈತರು, ಹಿಂದುಳಿದ ವರ್ಗದವರು, ಯೋಜನಾ ನೌಕರರು ತುಮಕೂರು ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸಿಪಿಐ ಮತ್ತು ಸಿಪಿಎಂ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಕಾರ್ಮಿಕ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಮನವಿ ಮಾಡಿದರು.