ನೆರೆ ತಾಲ್ಲೂಕಿನಲ್ಲಿದ್ದರೂ ಬಾರದ ಮುನಿಯಪ್ಪ!
ನೆರೆಯ ದೇವನಹಳ್ಳಿ ತಾಲ್ಲೂಕನ್ನು ಪ್ರತಿನಿಧಿಸುತ್ತಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಖಾಸಗಿ ಕಾರ್ಯಕ್ರಮಗಳಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಆದರೆ ಒಮ್ಮೆಯೂ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿಲ್ಲ. ಮುನಿಯಪ್ಪ–ಡಾ.ಎಂ.ಸಿ.ಸುಧಾಕರ್ ಅವರ ನಡುವಿನ ವಿರಸದ ಕಾರಣದಿಂದಲೇ ಜಿಲ್ಲೆಯಲ್ಲಿ ಮುನಿಯಪ್ಪ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿಲ್ಲವೇ ಎನ್ನುವ ಅನುಮಾನ ರಾಜಕೀಯ ವಲಯದಲ್ಲಿ ಇದೆ.