ಬಾಗಲಕೋಟೆ: ಮೂರನೇ ಬಾರಿಗೆ ಗೆಲುವು ಸಾಧಿಸಿದ್ದ ಪಾಟೀಲರು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ಆಗ ಪ್ರಧಾನಿಯಾಗಿದ್ದ ಇಂದಿರಾಗಾಂಧಿ ಅವರೇ ಪಾಟೀಲರ ಪರವಾಗಿ ಪ್ರಚಾರಕ್ಕೆ ಬಂದಿದ್ದರು. ‘ಸರ್ಕಾರದಲ್ಲಿ ಸಚಿವ ಸ್ಥಾನ ನೀಡಲು ಮುಂದಾದಾಗಲೂ ನಯವಾಗಿಯೇ ತಿರಸ್ಕರಿಸಿದ್ದರು’ ಎಂದು ಅವರ ಸೊಸೆ ವಿಜಯಲಕ್ಷ್ಮಿ ಪಾಟೀಲ ತಿಳಿಸಿದರು. ಜೀವನದುದ್ದಕ್ಕೂ ಆದರ್ಶ ಪ್ರಾಮಾಣಿಕತೆಯನ್ನು ಪಾಲಿಸಿಕೊಂಡು ಬಂದಿದ್ದರು. ಇಂದಿನ ರಾಜಕೀಯಕ್ಕೆ ಅವರ ಆದರ್ಶಗಳು ದಾರಿದೀಪವಾಗಬೇಕಿದೆ.