<p>ಗುವಾಹಟಿ (ಪಿಟಿಐ): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಸ್ಸಾಂ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಸ್ಥಳೀಯರ ಭೂಮಿ, ಪರಂಪರೆ ಮತ್ತು ಘನತೆಯನ್ನು ರಕ್ಷಿಸುವ ಹಾಗೂ ಮೂಲಸೌಕರ್ಯ ಕ್ಷೇತ್ರದಲ್ಲಿ ₹5 ಲಕ್ಷ ಕೋಟಿ ಹೂಡಿಕೆಯ ಘೋಷಣೆ ಮಾಡಿದ್ದಾರೆ.</p>.<p>ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರುವ ಪ್ರಯತ್ನದಲ್ಲಿರುವ ಬಿಜೆಪಿಯು ತನ್ನ ‘ಸಂಕಲ್ಪ ಪತ್ರ’ದಲ್ಲಿ ರಾಜ್ಯದ ಮತದಾರರಿಗೆ 31 ಭರವಸೆಗಳನ್ನು ನೀಡಿದೆ.</p>.<p>‘ಬಾಂಗ್ಲಾದೇಶಿ ಮಿಯಾ’ಗಳು ಅತಿಕ್ರಮಿಸಿರುವ ಭೂಮಿಯನ್ನು ವಶಪಡಿಸಿಕೊಳ್ಳುವುದು, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಭರವಸೆಗಳು ಪ್ರಣಾಳಿಕೆಯಲ್ಲಿ ಪ್ರಮುಖವಾಗಿವೆ.</p>.<p>ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಮತ್ತು ಅವರನ್ನು ರಾಜ್ಯದಿಂದ ಹೊರಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು 1950ರ ವಲಸಿಗರ (ಅಸ್ಸಾಂನಿಂದ ಹೊರಹಾಕುವ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಸ್ಥಳೀಯ ನಿವಾಸಿಗಳ ಭೂಮಿಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಲಾಗಿದೆ.</p>.<p>ಅಸ್ಸಾಂ ರಾಜ್ಯವನ್ನು ಪೂರ್ವ ಭಾರತದ ಹೆಬ್ಬಾಗಿಲು ಆಗಿ ಪರಿವರ್ತಿಸಲು ‘ಅಸ್ಸಾಂ ಗತಿ ಶಕ್ತಿ ಮಾಸ್ಟರ್ ಪ್ಲಾನ್’ ಯೋಜನೆಯಡಿ ₹5 ಲಕ್ಷ ಕೋಟಿ ಹೂಡಿಕೆ ಮಾಡುವ ಭರವಸೆಯನ್ನು ನೀಡಲಾಗಿದೆ.</p>.<p>‘ಕಾಂಗ್ರೆಸ್ಗೆ 60 ವರ್ಷಗಳಲ್ಲಿ ಸಾಧಿಸಲು ಆಗದ್ದನ್ನು ಬಿಜೆಪಿಯು ಒಂದು ದಶಕದಲ್ಲಿ ಮಾಡಿ ತೋರಿಸಿದೆ. ರಾಜ್ಯದ ಒಂದು ದಶಕದ ಪರಿವರ್ತನೆಯ ಆಧಾರದ ಮೇಲೆ ಈ ಪ್ರಣಾಳಿಕೆ ಸಿದ್ದಪಡಿಸಲಾಗಿದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-51-1173834493</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುವಾಹಟಿ (ಪಿಟಿಐ): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಸ್ಸಾಂ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಸ್ಥಳೀಯರ ಭೂಮಿ, ಪರಂಪರೆ ಮತ್ತು ಘನತೆಯನ್ನು ರಕ್ಷಿಸುವ ಹಾಗೂ ಮೂಲಸೌಕರ್ಯ ಕ್ಷೇತ್ರದಲ್ಲಿ ₹5 ಲಕ್ಷ ಕೋಟಿ ಹೂಡಿಕೆಯ ಘೋಷಣೆ ಮಾಡಿದ್ದಾರೆ.</p>.<p>ಅಸ್ಸಾಂನಲ್ಲಿ ಮತ್ತೆ ಅಧಿಕಾರಕ್ಕೇರುವ ಪ್ರಯತ್ನದಲ್ಲಿರುವ ಬಿಜೆಪಿಯು ತನ್ನ ‘ಸಂಕಲ್ಪ ಪತ್ರ’ದಲ್ಲಿ ರಾಜ್ಯದ ಮತದಾರರಿಗೆ 31 ಭರವಸೆಗಳನ್ನು ನೀಡಿದೆ.</p>.<p>‘ಬಾಂಗ್ಲಾದೇಶಿ ಮಿಯಾ’ಗಳು ಅತಿಕ್ರಮಿಸಿರುವ ಭೂಮಿಯನ್ನು ವಶಪಡಿಸಿಕೊಳ್ಳುವುದು, ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ ಮತ್ತು ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಭರವಸೆಗಳು ಪ್ರಣಾಳಿಕೆಯಲ್ಲಿ ಪ್ರಮುಖವಾಗಿವೆ.</p>.<p>ಅಕ್ರಮ ವಲಸಿಗರನ್ನು ಪತ್ತೆಹಚ್ಚುವ ಮತ್ತು ಅವರನ್ನು ರಾಜ್ಯದಿಂದ ಹೊರಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು 1950ರ ವಲಸಿಗರ (ಅಸ್ಸಾಂನಿಂದ ಹೊರಹಾಕುವ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು ಸ್ಥಳೀಯ ನಿವಾಸಿಗಳ ಭೂಮಿಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಲಾಗಿದೆ.</p>.<p>ಅಸ್ಸಾಂ ರಾಜ್ಯವನ್ನು ಪೂರ್ವ ಭಾರತದ ಹೆಬ್ಬಾಗಿಲು ಆಗಿ ಪರಿವರ್ತಿಸಲು ‘ಅಸ್ಸಾಂ ಗತಿ ಶಕ್ತಿ ಮಾಸ್ಟರ್ ಪ್ಲಾನ್’ ಯೋಜನೆಯಡಿ ₹5 ಲಕ್ಷ ಕೋಟಿ ಹೂಡಿಕೆ ಮಾಡುವ ಭರವಸೆಯನ್ನು ನೀಡಲಾಗಿದೆ.</p>.<p>‘ಕಾಂಗ್ರೆಸ್ಗೆ 60 ವರ್ಷಗಳಲ್ಲಿ ಸಾಧಿಸಲು ಆಗದ್ದನ್ನು ಬಿಜೆಪಿಯು ಒಂದು ದಶಕದಲ್ಲಿ ಮಾಡಿ ತೋರಿಸಿದೆ. ರಾಜ್ಯದ ಒಂದು ದಶಕದ ಪರಿವರ್ತನೆಯ ಆಧಾರದ ಮೇಲೆ ಈ ಪ್ರಣಾಳಿಕೆ ಸಿದ್ದಪಡಿಸಲಾಗಿದೆ’ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-51-1173834493</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>