<p>ಬಾಗಲಕೋಟೆ: ಉಪಚುನಾವಣೆಯಿಂದಲೇ ಕಾಂಗ್ರೆಸ್ ಪತನ ಶುರುವಾಗಲಿದೆ ಎಂದು ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ ಹೇಳಿದರು.</p>.<p>ಭಾನುವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಲಿದ್ದು, ದುರಾಡಳಿತದ ಸರ್ಕಾರ ಪತನವಾಗಲಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಮುಳುಗಡೆ ಪ್ರದೇಶವಾದ ಬಾಗಲಕೋಟೆ ಸರ್ವಾಂಗೀಣ ಅಭಿವೃದ್ಧಿಯಲ್ಲಿ ವೀರಣ್ಣ ಚರಂತಿಮಠರ ಪರಿಶ್ರಮವಿದೆ. ಅವರಿಗೆ ಬೆಂಬಲಿಸಬೇಕು ಎಂದು ಕೋರಿದರು.</p>.<p>ಮಾಜಿ ಸಚಿವ ರಾಜುಗೌಡ ನಾಯಕ ಮಾತನಾಡಿಮ ಉಪಚುನಾವಣೆಯಲ್ಲಿ ಚರಂತಿಮಠರನ್ನು ಗೆಲ್ಲಿಸಿ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಕೈಜೊಡಿಸಬೇಕು ಎಂದರು.</p>.<p>ಮಾಜಿ ಶಾಸಕ ಮಹಾಂತೇಶ ಡೊಡ್ಡಗೌಡರ, ಬಸವರಾಜ ಕಟಗೇರಿ, ಶರಣಪ್ಪ ಕೆರೂರ, ಕಪ್ಪಯ್ಯ ಮುತ್ತಿನಮಠ, ಸಂಗಣ್ಣಗೌಡ ಗೌಡರ, ಪಾಲಾಕ್ಷಿ ಕಟ್ಟಿಮಠ, ಸುಜಾತಾ ಶಿಂಧೆ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-1830271326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಉಪಚುನಾವಣೆಯಿಂದಲೇ ಕಾಂಗ್ರೆಸ್ ಪತನ ಶುರುವಾಗಲಿದೆ ಎಂದು ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ ಹೇಳಿದರು.</p>.<p>ಭಾನುವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರ ಪ್ರಚಾರ ಮಾಡಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಲಿದ್ದು, ದುರಾಡಳಿತದ ಸರ್ಕಾರ ಪತನವಾಗಲಿದೆ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮಾತನಾಡಿ, ಮುಳುಗಡೆ ಪ್ರದೇಶವಾದ ಬಾಗಲಕೋಟೆ ಸರ್ವಾಂಗೀಣ ಅಭಿವೃದ್ಧಿಯಲ್ಲಿ ವೀರಣ್ಣ ಚರಂತಿಮಠರ ಪರಿಶ್ರಮವಿದೆ. ಅವರಿಗೆ ಬೆಂಬಲಿಸಬೇಕು ಎಂದು ಕೋರಿದರು.</p>.<p>ಮಾಜಿ ಸಚಿವ ರಾಜುಗೌಡ ನಾಯಕ ಮಾತನಾಡಿಮ ಉಪಚುನಾವಣೆಯಲ್ಲಿ ಚರಂತಿಮಠರನ್ನು ಗೆಲ್ಲಿಸಿ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಕೈಜೊಡಿಸಬೇಕು ಎಂದರು.</p>.<p>ಮಾಜಿ ಶಾಸಕ ಮಹಾಂತೇಶ ಡೊಡ್ಡಗೌಡರ, ಬಸವರಾಜ ಕಟಗೇರಿ, ಶರಣಪ್ಪ ಕೆರೂರ, ಕಪ್ಪಯ್ಯ ಮುತ್ತಿನಮಠ, ಸಂಗಣ್ಣಗೌಡ ಗೌಡರ, ಪಾಲಾಕ್ಷಿ ಕಟ್ಟಿಮಠ, ಸುಜಾತಾ ಶಿಂಧೆ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-1830271326</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>