<p>ಬಾಗಲಕೋಟೆ: ‘ಗೃಹಲಕ್ಷ್ಮಿ ಹಣ ಜಮಾ ಮಾಡುವ ಮೂಲಕ ಸರ್ಕಾರ ಮತದಾರರಿಗೆ ಆಮಿಷವೊಡ್ಡುತ್ತಿದೆ. ಆದರೂ, ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿಯ ಹಣವನ್ನು ಉಪಚುನಾವಣಾ ಸಂದರ್ಭದಲ್ಲಿ ಮತದಾರರ ಖಾತೆಗೆ ಜಮಾ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ಹಣ ಹಂಚಬಾರದು ಎಂದು ಆಯೋಗ ಹೇಳುತ್ತಿದೆ. ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಚುನಾವಣೆ ಮುಗಿಯುವರೆಗೂ ಹಣ ಜಮಾ ಮಾಡಬಾರದು ಎಂದರು.</p>.<p>‘ಚುನಾವಣಾ ಆಯೋಗವೇ ಸ್ವಯಂ ಆಗಿ ದೂರು ದಾಖಲಿಸಿಕೊಳ್ಳಬೇಕಾಗಿತ್ತು. ಅದು ಹಾಗೆ ಮಾಡದ್ದರಿಂದ ಪತ್ರ ಬರೆದು ಆಯೋಗದ ಗಮನಕ್ಕೆ ತರುತ್ತೇನೆ‘ ಎಂದರು.</p>.<p>ಆಯೋಗಕ್ಕೆ ದೂರು ಕೊಡಲಿ: ‘ಗೃಹಲಕ್ಷ್ಮಿ ಯೋಜನೆ ಚುನಾವಣೆ ಸಂದರ್ಭದಲ್ಲಿ ಜಾರಿ ತಂದ ಯೋಜನೆಯಲ್ಲ. ಎರಡೂವರೆ ವರ್ಷಗಳಿಂದ ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗುತ್ತಿದೆ. ನಿಯಮಿತವಾಗಿ ನಡೆಯುವ ಕಾರ್ಯ ಅದು. ಆಯೋಗಕ್ಕೆ ದೂರು ಕೊಡಲಿ’ ಎಂದು ಸಚಿವ ಎಂ.ಬಿ. ಪಾಟೀಲ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಬಿಹಾರ ಚುನಾವಣೆ ಸಂದರ್ಭದಲ್ಲಿ ₹10 ಸಾವಿರ ಕೋಟಿ ಜಮಾ ಮಾಡಲಾಯಿತಲ್ಲ? ಮಹಾರಾಷ್ಟ್ರದಲ್ಲಿ ಚುನಾವಣೆ ಮುನ್ನ ಮಹಿಳೆಯರ ಖಾತೆಗಳಿಗೆ ಹಣ ಜಮಾ ಮಾಡಿ, ನಂತರ ಯೋಜನೆ ಬಂದ್ ಮಾಡಲಾಯಿತು. ರಾಜ್ಯದಲ್ಲಿ ನಾವು ಹಾಗೆ ಮಾಡಿಲ್ಲ. ಕೊಟ್ಟ ಮಾತಿನಂತೆ ಹಣ ಜಮಾ ಮಾಡುತ್ತಿದ್ದೇವೆ’ ಎಂದು ತಿರುಗೇಟು ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-2045413606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಗೃಹಲಕ್ಷ್ಮಿ ಹಣ ಜಮಾ ಮಾಡುವ ಮೂಲಕ ಸರ್ಕಾರ ಮತದಾರರಿಗೆ ಆಮಿಷವೊಡ್ಡುತ್ತಿದೆ. ಆದರೂ, ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿಯ ಹಣವನ್ನು ಉಪಚುನಾವಣಾ ಸಂದರ್ಭದಲ್ಲಿ ಮತದಾರರ ಖಾತೆಗೆ ಜಮಾ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ಹಣ ಹಂಚಬಾರದು ಎಂದು ಆಯೋಗ ಹೇಳುತ್ತಿದೆ. ಸರ್ಕಾರದ ಅನುದಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಚುನಾವಣೆ ಮುಗಿಯುವರೆಗೂ ಹಣ ಜಮಾ ಮಾಡಬಾರದು ಎಂದರು.</p>.<p>‘ಚುನಾವಣಾ ಆಯೋಗವೇ ಸ್ವಯಂ ಆಗಿ ದೂರು ದಾಖಲಿಸಿಕೊಳ್ಳಬೇಕಾಗಿತ್ತು. ಅದು ಹಾಗೆ ಮಾಡದ್ದರಿಂದ ಪತ್ರ ಬರೆದು ಆಯೋಗದ ಗಮನಕ್ಕೆ ತರುತ್ತೇನೆ‘ ಎಂದರು.</p>.<p>ಆಯೋಗಕ್ಕೆ ದೂರು ಕೊಡಲಿ: ‘ಗೃಹಲಕ್ಷ್ಮಿ ಯೋಜನೆ ಚುನಾವಣೆ ಸಂದರ್ಭದಲ್ಲಿ ಜಾರಿ ತಂದ ಯೋಜನೆಯಲ್ಲ. ಎರಡೂವರೆ ವರ್ಷಗಳಿಂದ ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗುತ್ತಿದೆ. ನಿಯಮಿತವಾಗಿ ನಡೆಯುವ ಕಾರ್ಯ ಅದು. ಆಯೋಗಕ್ಕೆ ದೂರು ಕೊಡಲಿ’ ಎಂದು ಸಚಿವ ಎಂ.ಬಿ. ಪಾಟೀಲ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p>.<p>‘ಬಿಹಾರ ಚುನಾವಣೆ ಸಂದರ್ಭದಲ್ಲಿ ₹10 ಸಾವಿರ ಕೋಟಿ ಜಮಾ ಮಾಡಲಾಯಿತಲ್ಲ? ಮಹಾರಾಷ್ಟ್ರದಲ್ಲಿ ಚುನಾವಣೆ ಮುನ್ನ ಮಹಿಳೆಯರ ಖಾತೆಗಳಿಗೆ ಹಣ ಜಮಾ ಮಾಡಿ, ನಂತರ ಯೋಜನೆ ಬಂದ್ ಮಾಡಲಾಯಿತು. ರಾಜ್ಯದಲ್ಲಿ ನಾವು ಹಾಗೆ ಮಾಡಿಲ್ಲ. ಕೊಟ್ಟ ಮಾತಿನಂತೆ ಹಣ ಜಮಾ ಮಾಡುತ್ತಿದ್ದೇವೆ’ ಎಂದು ತಿರುಗೇಟು ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-19-2045413606</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>