<p>ಬಾಗಲಕೋಟೆ: ‘ಬೆಳಿಗ್ಗೆ ಮುಸ್ಲಿಮರ ಜಪ, ಮಧ್ಯಾಹ್ನ ದಲಿತರು ಹಾಗೂ ರಾತ್ರಿ ಹಿಂದುಳಿದವರ ಜಪ ಮಾಡುತ್ತಾರೆ. ಆದರೆ, ಯಾವ ಸಮುದಾಯಗಳಿಗೂ ನ್ಯಾಯ ಕೊಟ್ಟಿಲ್ಲ’ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಮಕ್ಕಳು, ಎಲ್ಲರೂ ಭ್ರಷ್ಟರಾಗಿದ್ದಾರೆ. ಇದನ್ನು ನಾವು ಮಾತನಾಡಬಾರದು. ಆದರೆ, ಜನರಿಗೆ ಆಗುತ್ತಿರುವ ಅನ್ಯಾಯದಿಂದಾಗಿ ಮಾತನಾಡಲೇಬೇಕಿದೆ. ನಮ್ಮ ಜತೆಗಿದ್ದಾಗ ಬಂಗಾರದಂತಿದ್ದ ಸಿದ್ದರಾಮಯ್ಯ ಈಗ ಸತ್ಯ ನಾಶವಾಗಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಹಿಂದೆ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ಅವರೂ ಮುಖ್ಯಮಂತ್ರಿಯಾದಾಗ ಉಚಿತ ಯೋಜನೆಗಳನ್ನು ಜನರಿಗೆ ನೀಡಿದ್ಡರು. ಆರ್ಥಿಕ ಸ್ಥಿತಿ ಬಲಿಷ್ಠವಾಗಿತ್ತು. ಈಗ ಸರಿಯಾಗಿಲ್ಲ. ರಾಜ್ಯಕ್ಕೆ ಹೊರೆಯಾಗುವಂತೆ ಮಾಡುತ್ತಿದ್ದೀರಿ’ ಎಂದು ಆರೋಪಿಸಿದರು.</p>.<p>’ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರನ್ನು ಗೆಲ್ಲಿಸುವುದರ ಮೂಲಕ ಸರ್ಕಾರಕ್ಕೆ ತಕ್ಕಪಾಠ ಕಲಿಸಬೇಕಿದೆ’ ಎಂದರು.</p>.<p>ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ‘ಬಿಜೆಪಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಜೆಪಿಯ ಗೆಲುವು ಶತಸಿದ್ಧ’ ಎಂದರು.</p>.<p>ವಿಧಾನ ಪರಿಷತ್ ಅರುಣ ಶಹಾಪುರ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾ ಅಧ್ಯಕ್ಷ ಎಸ್.ಟಿ.ಪಾಟೀಲ, ಜಿ.ಎನ್.ಪಾಟೀಲ, ಯಲ್ಲಪ್ಪ ಬೆಂಡಿಗೇರಿ, ಸತ್ಯನಾರಾಯಣ ಹೇಮಾದ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-19-992359874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ‘ಬೆಳಿಗ್ಗೆ ಮುಸ್ಲಿಮರ ಜಪ, ಮಧ್ಯಾಹ್ನ ದಲಿತರು ಹಾಗೂ ರಾತ್ರಿ ಹಿಂದುಳಿದವರ ಜಪ ಮಾಡುತ್ತಾರೆ. ಆದರೆ, ಯಾವ ಸಮುದಾಯಗಳಿಗೂ ನ್ಯಾಯ ಕೊಟ್ಟಿಲ್ಲ’ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಮಕ್ಕಳು, ಎಲ್ಲರೂ ಭ್ರಷ್ಟರಾಗಿದ್ದಾರೆ. ಇದನ್ನು ನಾವು ಮಾತನಾಡಬಾರದು. ಆದರೆ, ಜನರಿಗೆ ಆಗುತ್ತಿರುವ ಅನ್ಯಾಯದಿಂದಾಗಿ ಮಾತನಾಡಲೇಬೇಕಿದೆ. ನಮ್ಮ ಜತೆಗಿದ್ದಾಗ ಬಂಗಾರದಂತಿದ್ದ ಸಿದ್ದರಾಮಯ್ಯ ಈಗ ಸತ್ಯ ನಾಶವಾಗಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಹಿಂದೆ ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್ ಅವರೂ ಮುಖ್ಯಮಂತ್ರಿಯಾದಾಗ ಉಚಿತ ಯೋಜನೆಗಳನ್ನು ಜನರಿಗೆ ನೀಡಿದ್ಡರು. ಆರ್ಥಿಕ ಸ್ಥಿತಿ ಬಲಿಷ್ಠವಾಗಿತ್ತು. ಈಗ ಸರಿಯಾಗಿಲ್ಲ. ರಾಜ್ಯಕ್ಕೆ ಹೊರೆಯಾಗುವಂತೆ ಮಾಡುತ್ತಿದ್ದೀರಿ’ ಎಂದು ಆರೋಪಿಸಿದರು.</p>.<p>’ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅವರನ್ನು ಗೆಲ್ಲಿಸುವುದರ ಮೂಲಕ ಸರ್ಕಾರಕ್ಕೆ ತಕ್ಕಪಾಠ ಕಲಿಸಬೇಕಿದೆ’ ಎಂದರು.</p>.<p>ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ‘ಬಿಜೆಪಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಜೆಪಿಯ ಗೆಲುವು ಶತಸಿದ್ಧ’ ಎಂದರು.</p>.<p>ವಿಧಾನ ಪರಿಷತ್ ಅರುಣ ಶಹಾಪುರ, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಜಿಲ್ಲಾ ಅಧ್ಯಕ್ಷ ಎಸ್.ಟಿ.ಪಾಟೀಲ, ಜಿ.ಎನ್.ಪಾಟೀಲ, ಯಲ್ಲಪ್ಪ ಬೆಂಡಿಗೇರಿ, ಸತ್ಯನಾರಾಯಣ ಹೇಮಾದ್ರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-19-992359874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>