<p>ಬೆಂಗಳೂರು: ‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜೂನ್ 30ರ ಒಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ನಡೆಸಲು ಸಂಬಂಧಿತರಿಗೆ ತಕ್ಷಣವೇ ನಿರ್ದೇಶನ ನೀಡಿ’ ಎಂದು ಜೆಡಿಎಸ್ ಕಾನೂನು ಘಟಕದ ನಿಯೋಗವು ರಾಜ್ಯ ಚುನಾವಣಾ ಆಯುಕ್ತ ಸಿ.ಎಸ್.ಸಂಗ್ರೇಶಿ ಅವರಿಗೆ ಮನವಿ ಸಲ್ಲಿಸಿದೆ.</p>.<p>ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ ನೇತೃತ್ವದಲ್ಲಿ ಸಂಗ್ರೇಶಿ ಅವರನ್ನು ಭೇಟಿ ಮಾಡಿದ್ದ ನಿಯೋಗವು, ‘ಬಿಬಿಎಂಪಿಗೆ ಈ ಹಿಂದೆ ಚುನಾವಣೆ ನಡೆದದ್ದು 2015ರಲ್ಲಿ. ಆ ನಂತರ ರಾಜ್ಯ ಸರ್ಕಾರವು ಒಂದಲ್ಲಾ ಒಂದು ನೆಪವೊಡ್ಡಿ, ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ. ಈಗ ಜನಗಣತಿಯ ಕಾರಣಕ್ಕೆ ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎನ್ನುತ್ತಿದೆ. ಇದನ್ನು ಪರಿಗಣಿಸಬಾರದು’ ಎಂದು ಕೋರಿದೆ.</p>.<p>‘ಪಾಲಿಕೆಗಳ ಚುನಾವಣೆ ಸೆಪ್ಟೆಂಬರ್ ಗೆ ಮುಂದೂಡುವಂತೆ ಜಿಬಿಎ ಸರ್ಕಾರಕ್ಕೆ ಪತ್ರ ಬರೆದಿದೆ. ಅದನ್ನು ಆಯೋಗವು ಪರಿಗಣಿಸಿದರೆ, ಸುಪ್ರೀಂ ಕೋರ್ಟ್ನ ನಿರ್ದೇಶನದ ಉಲ್ಲಂಘನೆ ಯಾಗುತ್ತದೆ. ಹೀಗಾಗಿ ಚುನಾವಣೆ ನಡೆಸುವಂತೆ ತಕ್ಷಣವೇ ನಿರ್ದೇಶನ ನೀಡಿ’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-4-1802011341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಜೂನ್ 30ರ ಒಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ನಡೆಸಲು ಸಂಬಂಧಿತರಿಗೆ ತಕ್ಷಣವೇ ನಿರ್ದೇಶನ ನೀಡಿ’ ಎಂದು ಜೆಡಿಎಸ್ ಕಾನೂನು ಘಟಕದ ನಿಯೋಗವು ರಾಜ್ಯ ಚುನಾವಣಾ ಆಯುಕ್ತ ಸಿ.ಎಸ್.ಸಂಗ್ರೇಶಿ ಅವರಿಗೆ ಮನವಿ ಸಲ್ಲಿಸಿದೆ.</p>.<p>ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ ನೇತೃತ್ವದಲ್ಲಿ ಸಂಗ್ರೇಶಿ ಅವರನ್ನು ಭೇಟಿ ಮಾಡಿದ್ದ ನಿಯೋಗವು, ‘ಬಿಬಿಎಂಪಿಗೆ ಈ ಹಿಂದೆ ಚುನಾವಣೆ ನಡೆದದ್ದು 2015ರಲ್ಲಿ. ಆ ನಂತರ ರಾಜ್ಯ ಸರ್ಕಾರವು ಒಂದಲ್ಲಾ ಒಂದು ನೆಪವೊಡ್ಡಿ, ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ. ಈಗ ಜನಗಣತಿಯ ಕಾರಣಕ್ಕೆ ಸಿಬ್ಬಂದಿ ಕೊರತೆ ಇದೆ. ಹೀಗಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲ ಎನ್ನುತ್ತಿದೆ. ಇದನ್ನು ಪರಿಗಣಿಸಬಾರದು’ ಎಂದು ಕೋರಿದೆ.</p>.<p>‘ಪಾಲಿಕೆಗಳ ಚುನಾವಣೆ ಸೆಪ್ಟೆಂಬರ್ ಗೆ ಮುಂದೂಡುವಂತೆ ಜಿಬಿಎ ಸರ್ಕಾರಕ್ಕೆ ಪತ್ರ ಬರೆದಿದೆ. ಅದನ್ನು ಆಯೋಗವು ಪರಿಗಣಿಸಿದರೆ, ಸುಪ್ರೀಂ ಕೋರ್ಟ್ನ ನಿರ್ದೇಶನದ ಉಲ್ಲಂಘನೆ ಯಾಗುತ್ತದೆ. ಹೀಗಾಗಿ ಚುನಾವಣೆ ನಡೆಸುವಂತೆ ತಕ್ಷಣವೇ ನಿರ್ದೇಶನ ನೀಡಿ’ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-4-1802011341</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>