<p>ಕಮಲನಗರ: ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಕಾನೂನು ಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.</p>.<p>ತಾಲ್ಲೂಕಿನ ದಾಬಕಾ(ಸಿ) ಮತ್ತು ಚೊಂಡಿಮುಖ್ಖೇಡ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ, ನಂತರ ವೋಟರ್ ಐಡಿ ಮ್ಯಾಪಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಇದರನ್ವಯ ಮತದಾರರ ಪಟ್ಟಿಯ ನಿಖರತೆ ಮತ್ತು ನವೀಕೃತ, ಎಲ್ಲರನ್ನೂ ಒಳಗೊಳ್ಳುವಂತೆ ಮಾಡಲಾಗುತ್ತಿದೆ. ಮತದಾರರ ಪಟ್ಟಿ ನವೀಕರಿಸಲು, ಸ್ಥಳಾಂತರಗೊಂಡವರ, ಮೃತಪಟ್ಟವರ ಹೆಸರು ತೆಗೆದು ಹಾಕಲು ಮತ್ತು ಹೊಸ ಅರ್ಹ ಮತದಾರರನ್ನು ಸೇರಿಸಲು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ತಹಶೀಲ್ದಾರ್ ಅಮಿತಕುಮಾರ ಸೇರಿ ಹಲವರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-33-483982284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲನಗರ: ರಾಜ್ಯದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಕಾನೂನು ಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.</p>.<p>ತಾಲ್ಲೂಕಿನ ದಾಬಕಾ(ಸಿ) ಮತ್ತು ಚೊಂಡಿಮುಖ್ಖೇಡ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ, ನಂತರ ವೋಟರ್ ಐಡಿ ಮ್ಯಾಪಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.</p>.<p>‘ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಇದರನ್ವಯ ಮತದಾರರ ಪಟ್ಟಿಯ ನಿಖರತೆ ಮತ್ತು ನವೀಕೃತ, ಎಲ್ಲರನ್ನೂ ಒಳಗೊಳ್ಳುವಂತೆ ಮಾಡಲಾಗುತ್ತಿದೆ. ಮತದಾರರ ಪಟ್ಟಿ ನವೀಕರಿಸಲು, ಸ್ಥಳಾಂತರಗೊಂಡವರ, ಮೃತಪಟ್ಟವರ ಹೆಸರು ತೆಗೆದು ಹಾಕಲು ಮತ್ತು ಹೊಸ ಅರ್ಹ ಮತದಾರರನ್ನು ಸೇರಿಸಲು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. ತಹಶೀಲ್ದಾರ್ ಅಮಿತಕುಮಾರ ಸೇರಿ ಹಲವರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260416-33-483982284</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>