<p><strong>ತಿರುವನಂತಪುರ:</strong> ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಗಮನಾರ್ಹ ಸಾಧನೆ ಮಾಡಿದೆ. </p><p>ಕೇರಳದ ಮೂರು ಕ್ಷೇತ್ರಗಳಲ್ಲಿ ಕಮಲ ಅರಳಿದೆ. ನೇಮಮ್ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್, ಕಳಕೂಟ್ಟಂ ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಮತ್ತು ಚಾಥನೂರ್ ಕ್ಷೇತ್ರದಲ್ಲಿ ವಿ. ಮುರಳೀಧರನ್ ಗೆಲುವು ಸಾಧಿಸಿದ್ದಾರೆ. ಈ ಪೈಕಿ ಎರಡು ಕಡೆಗಳಲ್ಲಿ ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. </p><p>ನೇಮಮ್ ಕ್ಷೇತ್ರದಲ್ಲಿ ತಮ್ಮ ನಿಕಟ ಸ್ಪರ್ಧಿ ವಿ.ಶಿವನ್ಕುಟ್ಟಿ ವಿರುದ್ಧ ಚಂದ್ರಶೇಖರ್ 3,500ಕ್ಕೂ ಅಧಿಕ ಮತಗಳ ಗೆಲುವು ಸಾಧಿಸಿದ್ದಾರೆ. </p><p>ಕಳಕೂಟ್ಟಂ ಕ್ಷೇತ್ರದಲ್ಲಿ ನಿಕಟ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಯ ಸುತ್ತಿನ ವರೆಗೂ ಸಾಗಿದ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕಡಕಂಪಳ್ಳಿ ಸುರೇಂದ್ರನ್ ವಿರುದ್ದ ಮುರಳೀಧರನ್ ಅಲ್ಪ ಮತಗಳ ಅಂತರದ ಜಯ (428 ಮತ) ಸಾಧಿಸಿದ್ದಾರೆ. </p><p>ಇನ್ನು ಚಾಥನೂರ್ ಕ್ಷೇತ್ರದಲ್ಲಿ ಗೋಪಕುಮಾರ್, ಎಲ್ಡಿಎಫ್ನ ಆರ್. ರಾಜೇಂದ್ರನ್ ಅವರನ್ನು 4,398 ಮತಗಳ ಅಂತರದಿಂದ ಸೋಲಿಸಿದ್ದಾರೆ. </p><p>2016ರಲ್ಲಿ ನೇಮಮ್ ಕ್ಷೇತ್ರದಿಂದಲೇ ಎನ್ಡಿಎದ ಒ.ರಾಜಗೋಪಾಲ್ ಐತಿಹಾಸಿಕ ಗೆಲುವು ದಾಖಲಿಸಿದ್ದರು. ಆದರೆ 2021ರಲ್ಲಿ ಯಾವುದೇ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈಗ ನೇಮಮ್ ಕ್ಷೇತ್ರವನ್ನು ಮರಳಿ ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. </p>.Kerala Results: ಸೋಲಿನ ಭೀತಿಯಿಂದ ಸಿಎಂ ಪಾರು, ನೆಲಕಚ್ಚಿದ ಸಚಿವರು.Kerala Results: ಕೇರಳದಲ್ಲಿ ಆಡಳಿತ ವಿರೋಧಿ ಅಲೆ, UDFಗೆ ವರದಾನವಾಗಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಗಮನಾರ್ಹ ಸಾಧನೆ ಮಾಡಿದೆ. </p><p>ಕೇರಳದ ಮೂರು ಕ್ಷೇತ್ರಗಳಲ್ಲಿ ಕಮಲ ಅರಳಿದೆ. ನೇಮಮ್ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್, ಕಳಕೂಟ್ಟಂ ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್ ಮತ್ತು ಚಾಥನೂರ್ ಕ್ಷೇತ್ರದಲ್ಲಿ ವಿ. ಮುರಳೀಧರನ್ ಗೆಲುವು ಸಾಧಿಸಿದ್ದಾರೆ. ಈ ಪೈಕಿ ಎರಡು ಕಡೆಗಳಲ್ಲಿ ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. </p><p>ನೇಮಮ್ ಕ್ಷೇತ್ರದಲ್ಲಿ ತಮ್ಮ ನಿಕಟ ಸ್ಪರ್ಧಿ ವಿ.ಶಿವನ್ಕುಟ್ಟಿ ವಿರುದ್ಧ ಚಂದ್ರಶೇಖರ್ 3,500ಕ್ಕೂ ಅಧಿಕ ಮತಗಳ ಗೆಲುವು ಸಾಧಿಸಿದ್ದಾರೆ. </p><p>ಕಳಕೂಟ್ಟಂ ಕ್ಷೇತ್ರದಲ್ಲಿ ನಿಕಟ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಯ ಸುತ್ತಿನ ವರೆಗೂ ಸಾಗಿದ ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕಡಕಂಪಳ್ಳಿ ಸುರೇಂದ್ರನ್ ವಿರುದ್ದ ಮುರಳೀಧರನ್ ಅಲ್ಪ ಮತಗಳ ಅಂತರದ ಜಯ (428 ಮತ) ಸಾಧಿಸಿದ್ದಾರೆ. </p><p>ಇನ್ನು ಚಾಥನೂರ್ ಕ್ಷೇತ್ರದಲ್ಲಿ ಗೋಪಕುಮಾರ್, ಎಲ್ಡಿಎಫ್ನ ಆರ್. ರಾಜೇಂದ್ರನ್ ಅವರನ್ನು 4,398 ಮತಗಳ ಅಂತರದಿಂದ ಸೋಲಿಸಿದ್ದಾರೆ. </p><p>2016ರಲ್ಲಿ ನೇಮಮ್ ಕ್ಷೇತ್ರದಿಂದಲೇ ಎನ್ಡಿಎದ ಒ.ರಾಜಗೋಪಾಲ್ ಐತಿಹಾಸಿಕ ಗೆಲುವು ದಾಖಲಿಸಿದ್ದರು. ಆದರೆ 2021ರಲ್ಲಿ ಯಾವುದೇ ಸ್ಥಾನ ಗೆಲ್ಲಲು ಸಾಧ್ಯವಾಗಿರಲಿಲ್ಲ. ಈಗ ನೇಮಮ್ ಕ್ಷೇತ್ರವನ್ನು ಮರಳಿ ಪಡೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. </p>.Kerala Results: ಸೋಲಿನ ಭೀತಿಯಿಂದ ಸಿಎಂ ಪಾರು, ನೆಲಕಚ್ಚಿದ ಸಚಿವರು.Kerala Results: ಕೇರಳದಲ್ಲಿ ಆಡಳಿತ ವಿರೋಧಿ ಅಲೆ, UDFಗೆ ವರದಾನವಾಗಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>