<p>ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್ ಪ್ರಕಾರ ಬಿಜೆಪಿ ಅಧಿಕಾರಕ್ಕೇರಲು ಬೇಕಿರುವ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದು, ಟಿಎಂಸಿ ಹಿನ್ನಡೆ ಅನುಭವಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವ ಮಮತಾ ಆಸೆಗೆ ತಣ್ಣೀರು ಎರಚುವ ಸಾಧ್ಯತೆ ದಟ್ಟವಾಗಿದೆ.</p><p>ಬಹುತೇಕ ಮತದಾನೋತ್ತರ ಸಮೀಕ್ಷೆಗಳು 150ರಿಂದ 170 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದವು. ಈಗ ಅದೇ ನಿಜವಾಗುವ ಲಕ್ಷಣ ಕಾಣುತ್ತಿದೆ. ಒಂದು ಕಾಲದಲ್ಲಿ ಮಮತಾ ಆಪ್ತ ಕಾರ್ಯದರ್ಶಿಯಾಗಿದ್ದ ಸುವೇಂದು ಈಗ ಅವರನ್ನು ಮೆಟ್ಟಿ ನಿಲ್ಲುವತ್ತ ದಾಪುಗಾಲಿಟ್ಟಿದ್ದಾರೆ.</p><p> 2021ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸುವುದೂ ಅಲ್ಲದೇ, ಬಿಜೆಪಿಗೆ 70ಕ್ಕೂ ಅಧಿಕ ಸ್ಥಾನ ತಂದುಕೊಟ್ಟಿದ್ದ ಸುವೇಂದು ಅಧಿಕಾರಿ, ಈ ಬಾರಿಯೂ ಭವಾನಿಪುರ ಕ್ಷೇತ್ರದಲ್ಲಿ ಮಮತಾಗೆ ಪೈಪೋಟಿ ನೀಡಿದ್ದಾರೆ. 2021ರಲ್ಲೇ ನಡೆದ ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಮತ್ತೆ ಆಯ್ಕೆಯಾಗಿದ್ದರು. </p><p>ಕೋಲ್ಕತ್ತ ಜಿಲ್ಲೆಯೊಳಗೆ ಬರುವ ಭವಾನಿಪುರ ಕ್ಷೇತ್ರವು 2011ರಿಂದ ತೃಣಮೂಲ ಪಕ್ಷದ ಭದ್ರಕೋಟೆಯಾಗಿದೆ. ಆ ಸಮಯದಲ್ಲಿ ಸುಬ್ರತಾ ಬಕ್ಷಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅದಕ್ಕೂ ಮೊದಲು ನಾಲ್ಕು ಚುನಾವಣೆಗಳಲ್ಲಿ ಇದನ್ನು ಕಾಲಿಘಾಟ್ ಎಂದು ಕರೆಯಲಾಗುತ್ತಿತ್ತು. ಕಾಂಗ್ರೆಸ್ ಮೂರು ಬಾರಿ ಜಯಗಳಿಸಿತ್ತು.</p><p>ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಪ್ರತಿ ಹಂತದಲ್ಲೂ ಗುಂಡಿನ ಚಕಮಕಿ ನಡೆದಿತ್ತು. ಮತಯಂತ್ರ ಟ್ಯಾಂಪರಿಂಗ್ ಆರೋಪ ಕೇಳಿಬಂದಿತ್ತು. ಹಾಗಾಗಿ, 2 ಕ್ಷೇತ್ರಗಳಲ್ಲಿ15 ಮತಕೇಂದ್ರದಲ್ಲಿ ಮರು ಮತದಾನ ನಡೆದಿತ್ತು.</p><p>2021ರ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು 294 ಸ್ಥಾನಗಳ ಪೈಕಿ 215 ಸ್ಥಾನಗಳನ್ನು ಗೆದ್ದಿತ್ತು. </p> .Assembly Elections 2026 Live: ಬಂಗಾಳದಲ್ಲಿ ಬಿಜೆಪಿ ಅಲೆ, ತಮಿಳುನಾಡಿನಲ್ಲಿ 'ಪರ್ಯಾಯ' ಪಕ್ಷ ಉದಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ. ಮತ ಎಣಿಕೆಯ ಟ್ರೆಂಡ್ ಪ್ರಕಾರ ಬಿಜೆಪಿ ಅಧಿಕಾರಕ್ಕೇರಲು ಬೇಕಿರುವ 150ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದು, ಟಿಎಂಸಿ ಹಿನ್ನಡೆ ಅನುಭವಿಸಿದೆ. ಈ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವ ಮಮತಾ ಆಸೆಗೆ ತಣ್ಣೀರು ಎರಚುವ ಸಾಧ್ಯತೆ ದಟ್ಟವಾಗಿದೆ.</p><p>ಬಹುತೇಕ ಮತದಾನೋತ್ತರ ಸಮೀಕ್ಷೆಗಳು 150ರಿಂದ 170 ಕ್ಷೇತ್ರಗಳಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದವು. ಈಗ ಅದೇ ನಿಜವಾಗುವ ಲಕ್ಷಣ ಕಾಣುತ್ತಿದೆ. ಒಂದು ಕಾಲದಲ್ಲಿ ಮಮತಾ ಆಪ್ತ ಕಾರ್ಯದರ್ಶಿಯಾಗಿದ್ದ ಸುವೇಂದು ಈಗ ಅವರನ್ನು ಮೆಟ್ಟಿ ನಿಲ್ಲುವತ್ತ ದಾಪುಗಾಲಿಟ್ಟಿದ್ದಾರೆ.</p><p> 2021ರ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಮಮತಾರನ್ನು ಸೋಲಿಸುವುದೂ ಅಲ್ಲದೇ, ಬಿಜೆಪಿಗೆ 70ಕ್ಕೂ ಅಧಿಕ ಸ್ಥಾನ ತಂದುಕೊಟ್ಟಿದ್ದ ಸುವೇಂದು ಅಧಿಕಾರಿ, ಈ ಬಾರಿಯೂ ಭವಾನಿಪುರ ಕ್ಷೇತ್ರದಲ್ಲಿ ಮಮತಾಗೆ ಪೈಪೋಟಿ ನೀಡಿದ್ದಾರೆ. 2021ರಲ್ಲೇ ನಡೆದ ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಮತ್ತೆ ಆಯ್ಕೆಯಾಗಿದ್ದರು. </p><p>ಕೋಲ್ಕತ್ತ ಜಿಲ್ಲೆಯೊಳಗೆ ಬರುವ ಭವಾನಿಪುರ ಕ್ಷೇತ್ರವು 2011ರಿಂದ ತೃಣಮೂಲ ಪಕ್ಷದ ಭದ್ರಕೋಟೆಯಾಗಿದೆ. ಆ ಸಮಯದಲ್ಲಿ ಸುಬ್ರತಾ ಬಕ್ಷಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅದಕ್ಕೂ ಮೊದಲು ನಾಲ್ಕು ಚುನಾವಣೆಗಳಲ್ಲಿ ಇದನ್ನು ಕಾಲಿಘಾಟ್ ಎಂದು ಕರೆಯಲಾಗುತ್ತಿತ್ತು. ಕಾಂಗ್ರೆಸ್ ಮೂರು ಬಾರಿ ಜಯಗಳಿಸಿತ್ತು.</p><p>ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ನಡೆದಿತ್ತು. ಪ್ರತಿ ಹಂತದಲ್ಲೂ ಗುಂಡಿನ ಚಕಮಕಿ ನಡೆದಿತ್ತು. ಮತಯಂತ್ರ ಟ್ಯಾಂಪರಿಂಗ್ ಆರೋಪ ಕೇಳಿಬಂದಿತ್ತು. ಹಾಗಾಗಿ, 2 ಕ್ಷೇತ್ರಗಳಲ್ಲಿ15 ಮತಕೇಂದ್ರದಲ್ಲಿ ಮರು ಮತದಾನ ನಡೆದಿತ್ತು.</p><p>2021ರ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು 294 ಸ್ಥಾನಗಳ ಪೈಕಿ 215 ಸ್ಥಾನಗಳನ್ನು ಗೆದ್ದಿತ್ತು. </p> .Assembly Elections 2026 Live: ಬಂಗಾಳದಲ್ಲಿ ಬಿಜೆಪಿ ಅಲೆ, ತಮಿಳುನಾಡಿನಲ್ಲಿ 'ಪರ್ಯಾಯ' ಪಕ್ಷ ಉದಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>