ಅಸ್ಸಾಂನ ಚಹಾ ತೋಟಗಳಲ್ಲಿ ದಿನಗೂಲಿಗೆ ಕೆಲಸ ಮಾಡುವ ನೌಕರರು ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಒಕ್ಕೂಟವನ್ನು ಬೆಂಬಲಿಸಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಲಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಹಾ ತೋಟಗಳ ನೌಕರರ ವೇತನವನ್ನು ಏರಿಕೆ ಮಾಡಲಾಗುವುದು ಎಂದು ಮೂರು ವರ್ಷಗಳ ಹಿಂದೆ ನಾನು ಆಸ್ಸಾಂಗೆ ಭೇಟಿ ನೀಡಿದ್ದಾಗ ಭರವಸೆ ನೀಡಿದ್ದೆ. ಆದರೆ ನೌಕರರು ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ ಮತ್ತು ಅವರ ವೇತನ ₹250ಕ್ಕಿಂತ ಹೆಚ್ಚಳವಾಗಿಲ್ಲ. ಆಡಳಿತಾರೂಢ ಬಿಜೆಪಿಯು ಕೇಂದ್ರದಲ್ಲಿ ಮರಳಿ ಅಧಿಕಾರಕ್ಕೆ ಬಂದರೆ ಅದು ಸಂವಿಧಾನವನ್ನು ಬದಲಿಸಲಿದೆ