<p><strong>ದಾವಣಗೆರೆ:</strong> ದಾವಣಗೆರೆ ದಕ್ಷಿಣದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.</p>.<p>ನಿತ್ಯವೂ ವಿವಿಧ ಗ್ರಾಮಗಳತ್ತ ಹೆಜ್ಜೆ ಹಾಕುತ್ತಿರುವ ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತದಾರರ ಮನ ವೊಲಿಕೆಗೆ ಕಸರತ್ತು ನಡೆಸುತ್ತಿದ್ದಾರೆ. ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದಾರೆ.</p>.<p>ಬೆಳಿಗ್ಗೆ, ಸಂಜೆ ಮಾತ್ರವಲ್ಲದೇ ಮಧ್ಯಾಹ್ನದ ಸುಡುಬಿಸಿಲಿನಲ್ಲೂ ಚುನಾವಣಾ ಪ್ರಚಾರದ ಕಾರ್ಯ ಸಾಗಿದೆ. ವಿವಿಧ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರೂ, ಗಾಮಾಂತರ ಭಾಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಅಬ್ಬರವೇ ಹೆಚ್ಚಾಗಿ ಕಾಣುತ್ತಿದೆ.</p>.<p>ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ 50 ಮತಗಟ್ಟೆಗಳಿವೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು ಈ ಗ್ರಾಮಗಳ ಮತಗಳೂ ಬಹುಮುಖ್ಯ ಪಾತ್ರವಹಿಸುತ್ತವೆ. ಇದೇ ಕಾರಣಕ್ಕೆ ವಿವಿಧ ಪಕ್ಷಗಳ ಮುಖಂಡರು ಗ್ರಾಮೀಣರ ಮತ ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ.</p>.<p>ಗ್ರಾಮದ ಬಸ್ ನಿಲ್ದಾಣ, ಜಗುಲಿ ಕಟ್ಟೆ, ದೇವಸ್ಥಾನದ ಆವರಣ, ಹೋಟೆಲ್ಗಳಲ್ಲಿ ಸದ್ಯ ಉಪಚುನಾವಣೆಯ ಬಗ್ಗೆಯೇ ಹೆಚ್ಚು ಚರ್ಚೆ ನಡೆಯುತ್ತಿರುವುದು ಕಂಡು ಬರುತ್ತಿದೆ.</p>.<p>‘ಗ್ರಾಮದಲ್ಲಿ ಬಿಜೆಪಿ– ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ಇದೆ. ಕುಕ್ಕುವಾಡ ಶುಗರ್ ಕಾರ್ಖಾನೆಯಿಂದ ಸ್ಥಳೀಯರಿಗೆ ಆಗುತ್ತಿರುವ ದೂಳಿನ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಈ ಬಗ್ಗೆ ಪ್ರಚಾರಕ್ಕೆ ಬರುವ ವಿವಿಧ ಪಕ್ಷಗಳ ಮುಖಂಡರು ಮಾತನಾಡುತ್ತಿಲ್ಲ. ಕಾರ್ಯಕರ್ತರು, ಮುಖಂಡರು ಮಾತ್ರ ಬರುತ್ತಿದ್ದಾರೆ. ರಾಜ್ಯ ಮಟ್ಟದ ನಾಯಕರು ಇನ್ನೂ ಬಂದಿಲ್ಲ’ ಎನ್ನುತ್ತಾರೆ ನಾಗರಸನಹಳ್ಳಿಯ ಪ್ರಕಾಶ್ ಡಿ.ವಿ.</p>.<p>‘ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಕಾರ್ಯಕರ್ತರು ಪಕ್ಷಗಳ ಅಭ್ಯರ್ಥಿಗಳ ಪರ ವಿವಿಧ ಗ್ರಾಮಗಳಿಗೆ ಹೋಗಿ ಬರುತ್ತಿದ್ದಾರೆ. ಎರಡೂ ಪಕ್ಷಗಳ ಅಭ್ಯರ್ಥಿಗಳು ಇನ್ನೂ ಗ್ರಾಮಕ್ಕೆ ಬಂದಿಲ್ಲ’ ಎಂದು ಕುಕ್ಕುವಾಡದ ಕೆ.ಎನ್.ಪ್ರಶಾಂತ್ ಹೇಳಿದರು.</p>.<p>‘ಚುನಾವಣಾ ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊನೆಯ 3–4 ದಿನಗಳಿದ್ದಾಗ ದೊಡ್ಡ ಮಟ್ಟದಲ್ಲಿ ಡಿನ್ನರ್ ಪಾರ್ಟಿಗಳು ಆಯೋಜನೆಯಾಗುವ ವಾತಾವರಣ ಇದೆ’ ಎನ್ನುತ್ತಾರೆ ಬಲ್ಲೂರು ಗ್ರಾಮದ ಬಸವರಾಜ.</p>.<p>‘ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಅವರ ತಾಯಿ ಪ್ರಭಾ ಅವರು ಗ್ರಾಮದಲ್ಲಿ ಈಗಾಗಲೇ ಪ್ರಚಾರ ನಡೆಸಿದ್ದಾರೆ. ಈ ಬಾರಿ ಎರಡೂ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ’ ಎಂದು ಮುದಹದಡಿ ಗ್ರಾಮದ ಲೋಕೇಶ್ ಹೇಳಿದರು.</p>.<p>ಬಸಾಪುರ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು, ಮುಖಂಡರು ಇನ್ನೂ ಭೇಟಿ ನೀಡಿ ಮತಯಾಚಿಸಿಲ್ಲ. ಸ್ಥಳೀಯ ಕಾರ್ಯಕರ್ತರೇ ಅವರವರ ಪಕ್ಷಗಳ ಕರಪತ್ರ ಹಂಚಿ ಪ್ರಚಾರದಲ್ಲಿ ತೊಡಗಿದ್ದಾರೆ.</p>.<p><strong>ಗ್ರಾಮಗಳಿಗೆ ಉಸ್ತುವಾರಿಗಳ ನೇಮಕ</strong></p><p>‘ಜರಿಕಟ್ಟೆ, ಹದಡಿ, ಮಾಗನೂರು, ಶಿರಮಗೊಂಡನಹಳ್ಳಿ, ಆರನೇ ಕಲ್ಲು, ಬಿಸಲೇರಿ, ಮಹದೇವಪುರ, ಬಲ್ಲೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಪ್ರಚಾರ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್ ತಿಳಿಸಿದರು. </p><p>‘ಪ್ರತಿ ಗ್ರಾಮಕ್ಕೂ ಪಾಲಿಕೆಯ ಮಾಜಿ ಸದಸ್ಯರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಮತದಾರರ ಪಟ್ಟಿಯನ್ನು ಆಧರಿಸಿ ಮನೆಮನೆಗೆ ತೆರಳಿ ಮತಯಾಚಿಸಲಾಗುತ್ತಿದೆ’ ಎಂದು ಹೇಳಿದರು. </p>.<p><strong>ಪ್ರಭಾ, ಸಮರ್ಥ್ ಪ್ರತ್ಯೇಕ ಪ್ರಚಾರ</strong> </p><p>ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಮರ್ಥ್ ಶಾಮನೂರು ಅವರು ತಮ್ಮದೇ ತಂಡಗಳನ್ನು ಕಟ್ಟಿಕೊಂಡು ಪ್ರತ್ಯೇಕವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. </p><p>ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಸೋಮವಾರದಿಂದ ಮತಯಾಚನೆಗೆ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ತಿಳಿಸಿದರು. </p><p>‘ಪ್ರಭಾ ಅವರು ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಸಮರ್ಥ್ ಅವರು ಮನೆ, ಮನೆಗೆ ತೆರಳಿ ಮತಯಾಚಿಸುತ್ತಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗಿದೆ’ ಎಂದರು. </p><p>‘ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ನಗರದಲ್ಲಿನ ಕೆಪಿಸಿಸಿ ಚುನಾವಣಾ ಕ್ಯಾಂಪ್ಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಕೆಪಿಸಿಸಿ ಉಪಾಧ್ಯಕ್ಷ ಮುಝಮ್ಮಿಲ್ ಹುಸೇನ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ನಗರದಲ್ಲಿಯೇ ವಾಸ್ತವ್ಯ ಹೂಡಿ ಮರುದಿನವೂ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ದಾವಣಗೆರೆ ದಕ್ಷಿಣದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.</p>.<p>ನಿತ್ಯವೂ ವಿವಿಧ ಗ್ರಾಮಗಳತ್ತ ಹೆಜ್ಜೆ ಹಾಕುತ್ತಿರುವ ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತದಾರರ ಮನ ವೊಲಿಕೆಗೆ ಕಸರತ್ತು ನಡೆಸುತ್ತಿದ್ದಾರೆ. ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಭ್ಯರ್ಥಿಗಳ ಪರ ಮತಯಾಚಿಸುತ್ತಿದ್ದಾರೆ.</p>.<p>ಬೆಳಿಗ್ಗೆ, ಸಂಜೆ ಮಾತ್ರವಲ್ಲದೇ ಮಧ್ಯಾಹ್ನದ ಸುಡುಬಿಸಿಲಿನಲ್ಲೂ ಚುನಾವಣಾ ಪ್ರಚಾರದ ಕಾರ್ಯ ಸಾಗಿದೆ. ವಿವಿಧ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದರೂ, ಗಾಮಾಂತರ ಭಾಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಅಬ್ಬರವೇ ಹೆಚ್ಚಾಗಿ ಕಾಣುತ್ತಿದೆ.</p>.<p>ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿ 50 ಮತಗಟ್ಟೆಗಳಿವೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು ಈ ಗ್ರಾಮಗಳ ಮತಗಳೂ ಬಹುಮುಖ್ಯ ಪಾತ್ರವಹಿಸುತ್ತವೆ. ಇದೇ ಕಾರಣಕ್ಕೆ ವಿವಿಧ ಪಕ್ಷಗಳ ಮುಖಂಡರು ಗ್ರಾಮೀಣರ ಮತ ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ.</p>.<p>ಗ್ರಾಮದ ಬಸ್ ನಿಲ್ದಾಣ, ಜಗುಲಿ ಕಟ್ಟೆ, ದೇವಸ್ಥಾನದ ಆವರಣ, ಹೋಟೆಲ್ಗಳಲ್ಲಿ ಸದ್ಯ ಉಪಚುನಾವಣೆಯ ಬಗ್ಗೆಯೇ ಹೆಚ್ಚು ಚರ್ಚೆ ನಡೆಯುತ್ತಿರುವುದು ಕಂಡು ಬರುತ್ತಿದೆ.</p>.<p>‘ಗ್ರಾಮದಲ್ಲಿ ಬಿಜೆಪಿ– ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ಇದೆ. ಕುಕ್ಕುವಾಡ ಶುಗರ್ ಕಾರ್ಖಾನೆಯಿಂದ ಸ್ಥಳೀಯರಿಗೆ ಆಗುತ್ತಿರುವ ದೂಳಿನ ಸಮಸ್ಯೆಗೆ ಪರಿಹಾರ ದೊರೆತಿಲ್ಲ. ಈ ಬಗ್ಗೆ ಪ್ರಚಾರಕ್ಕೆ ಬರುವ ವಿವಿಧ ಪಕ್ಷಗಳ ಮುಖಂಡರು ಮಾತನಾಡುತ್ತಿಲ್ಲ. ಕಾರ್ಯಕರ್ತರು, ಮುಖಂಡರು ಮಾತ್ರ ಬರುತ್ತಿದ್ದಾರೆ. ರಾಜ್ಯ ಮಟ್ಟದ ನಾಯಕರು ಇನ್ನೂ ಬಂದಿಲ್ಲ’ ಎನ್ನುತ್ತಾರೆ ನಾಗರಸನಹಳ್ಳಿಯ ಪ್ರಕಾಶ್ ಡಿ.ವಿ.</p>.<p>‘ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಕಾರ್ಯಕರ್ತರು ಪಕ್ಷಗಳ ಅಭ್ಯರ್ಥಿಗಳ ಪರ ವಿವಿಧ ಗ್ರಾಮಗಳಿಗೆ ಹೋಗಿ ಬರುತ್ತಿದ್ದಾರೆ. ಎರಡೂ ಪಕ್ಷಗಳ ಅಭ್ಯರ್ಥಿಗಳು ಇನ್ನೂ ಗ್ರಾಮಕ್ಕೆ ಬಂದಿಲ್ಲ’ ಎಂದು ಕುಕ್ಕುವಾಡದ ಕೆ.ಎನ್.ಪ್ರಶಾಂತ್ ಹೇಳಿದರು.</p>.<p>‘ಚುನಾವಣಾ ಪ್ರಚಾರದ ಬಿಸಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊನೆಯ 3–4 ದಿನಗಳಿದ್ದಾಗ ದೊಡ್ಡ ಮಟ್ಟದಲ್ಲಿ ಡಿನ್ನರ್ ಪಾರ್ಟಿಗಳು ಆಯೋಜನೆಯಾಗುವ ವಾತಾವರಣ ಇದೆ’ ಎನ್ನುತ್ತಾರೆ ಬಲ್ಲೂರು ಗ್ರಾಮದ ಬಸವರಾಜ.</p>.<p>‘ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಅವರ ತಾಯಿ ಪ್ರಭಾ ಅವರು ಗ್ರಾಮದಲ್ಲಿ ಈಗಾಗಲೇ ಪ್ರಚಾರ ನಡೆಸಿದ್ದಾರೆ. ಈ ಬಾರಿ ಎರಡೂ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ’ ಎಂದು ಮುದಹದಡಿ ಗ್ರಾಮದ ಲೋಕೇಶ್ ಹೇಳಿದರು.</p>.<p>ಬಸಾಪುರ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು, ಮುಖಂಡರು ಇನ್ನೂ ಭೇಟಿ ನೀಡಿ ಮತಯಾಚಿಸಿಲ್ಲ. ಸ್ಥಳೀಯ ಕಾರ್ಯಕರ್ತರೇ ಅವರವರ ಪಕ್ಷಗಳ ಕರಪತ್ರ ಹಂಚಿ ಪ್ರಚಾರದಲ್ಲಿ ತೊಡಗಿದ್ದಾರೆ.</p>.<p><strong>ಗ್ರಾಮಗಳಿಗೆ ಉಸ್ತುವಾರಿಗಳ ನೇಮಕ</strong></p><p>‘ಜರಿಕಟ್ಟೆ, ಹದಡಿ, ಮಾಗನೂರು, ಶಿರಮಗೊಂಡನಹಳ್ಳಿ, ಆರನೇ ಕಲ್ಲು, ಬಿಸಲೇರಿ, ಮಹದೇವಪುರ, ಬಲ್ಲೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರು ಪ್ರಚಾರ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ರಾಜಶೇಖರ್ ತಿಳಿಸಿದರು. </p><p>‘ಪ್ರತಿ ಗ್ರಾಮಕ್ಕೂ ಪಾಲಿಕೆಯ ಮಾಜಿ ಸದಸ್ಯರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಮತದಾರರ ಪಟ್ಟಿಯನ್ನು ಆಧರಿಸಿ ಮನೆಮನೆಗೆ ತೆರಳಿ ಮತಯಾಚಿಸಲಾಗುತ್ತಿದೆ’ ಎಂದು ಹೇಳಿದರು. </p>.<p><strong>ಪ್ರಭಾ, ಸಮರ್ಥ್ ಪ್ರತ್ಯೇಕ ಪ್ರಚಾರ</strong> </p><p>ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸಮರ್ಥ್ ಶಾಮನೂರು ಅವರು ತಮ್ಮದೇ ತಂಡಗಳನ್ನು ಕಟ್ಟಿಕೊಂಡು ಪ್ರತ್ಯೇಕವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. </p><p>ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಸೋಮವಾರದಿಂದ ಮತಯಾಚನೆಗೆ ಅಖಾಡಕ್ಕೆ ಇಳಿಯಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ತಿಳಿಸಿದರು. </p><p>‘ಪ್ರಭಾ ಅವರು ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಸಮರ್ಥ್ ಅವರು ಮನೆ, ಮನೆಗೆ ತೆರಳಿ ಮತಯಾಚಿಸುತ್ತಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗಿದೆ’ ಎಂದರು. </p><p>‘ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ನಗರದಲ್ಲಿನ ಕೆಪಿಸಿಸಿ ಚುನಾವಣಾ ಕ್ಯಾಂಪ್ಗೆ ಭೇಟಿ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಕೆಪಿಸಿಸಿ ಉಪಾಧ್ಯಕ್ಷ ಮುಝಮ್ಮಿಲ್ ಹುಸೇನ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ನಗರದಲ್ಲಿಯೇ ವಾಸ್ತವ್ಯ ಹೂಡಿ ಮರುದಿನವೂ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>