<p>ದಾವಣಗೆರೆ: ‘ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳಂ ವಿಧಾನಸಭೆ ಚುನಾವಣೆ ವೇಳೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕೆಲವು ಮತದಾರರನ್ನು ಕೈಬಿಡಲಾಗಿದೆ. ಇದರಿಂದಾಗಿ ಚುನಾವಣಾ ಫಲಿತಾಂಶದಲ್ಲೂ ವ್ಯತ್ಯಾಸವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಚುನಾವಣಾ ಆಯೋಗ ನೋಡಿಕೊಳ್ಳಬೇಕು’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ತಿಳಿಸಿದರು.</p>.<p>‘ಅರ್ಹರ ಹೆಸರು ಕೈಬಿಟ್ಟು ಹೋಗದಂತೆ ಸಚಿವರು, ಸಂಸದರು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಬಡವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಸಲುವಾಗಿ ಎಸ್ಐಆರ್ ಮೂಲಕ ದೊಡ್ಡ ಸಂಚು ನಡೆಸಲಾಗಿದೆ. ಎಸ್ಐಆರ್ ಪ್ರಕ್ರಿಯೆ ಮುಗಿಯುವವರೆಗೂ ಎಚ್ಚರಿಕೆಯಿಂದ ಇರುವಂತೆ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತದೆ’ ಎಂದರು.</p>.<p>‘ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪ್ರತಿಯೊಬ್ಬರೂ ತಮ್ಮ ವಿವರ ಸಲ್ಲಿಸಬೇಕು. ಇಲ್ಲವಾದರೆ ಮತದಾನದ ಹಕ್ಕು ಕಳೆದುಕೊಳ್ಳಬೇಕಾಗುತ್ತದೆ. ಬಡವರು ಮತದಾನದ ಹಕ್ಕು ಕಳೆದುಕೊಂಡರೆ ಪಿಂಚಣಿ, ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಬದ್ಧತೆಯೊಂದಿಗೆ ಕೆಲಸ ಮಾಡುತ್ತದೆ’ ಎಂದು ಹೇಳಿದರು.</p>.<p>‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನಗೆ ಅನುಕೂಲವಾಗುವ ರೀತಿ ಮತದಾರರ ಪಟ್ಟಿ ಪರಿಷ್ಕರಿಸುತ್ತಿರುವ ಆರೋಪವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಜಾಸತ್ತಾತ್ಮಕವಲ್ಲದ, ಅವೈಜ್ಞಾನಿಕ ಪ್ರಕ್ರಿಯೆಯಿಂದ ರಾಜ್ಯದ ಮತದಾರರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ, ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗಿದೆ’ ಎಂದರು.</p>.<p>ಕಾಂಗ್ರೆಸ್ ಪಕ್ಷದ ಇಂಟೆಕ್ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ, ಗ್ಯಾರಂಟಿ ಸಮಿತಿ ಸದಸ್ಯ ಎಂ.ಕೆ.ಲಿಯಾಖತ್ ಅಲಿ, ಮುಖಂಡರಾದ ಡಿ.ಶಿವಕುಮಾರ, ಬಿ.ಎಸ್.ಸುರೇಶ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-94223101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ‘ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳಂ ವಿಧಾನಸಭೆ ಚುನಾವಣೆ ವೇಳೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕೆಲವು ಮತದಾರರನ್ನು ಕೈಬಿಡಲಾಗಿದೆ. ಇದರಿಂದಾಗಿ ಚುನಾವಣಾ ಫಲಿತಾಂಶದಲ್ಲೂ ವ್ಯತ್ಯಾಸವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಚುನಾವಣಾ ಆಯೋಗ ನೋಡಿಕೊಳ್ಳಬೇಕು’ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್ ತಿಳಿಸಿದರು.</p>.<p>‘ಅರ್ಹರ ಹೆಸರು ಕೈಬಿಟ್ಟು ಹೋಗದಂತೆ ಸಚಿವರು, ಸಂಸದರು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಬಡವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಸಲುವಾಗಿ ಎಸ್ಐಆರ್ ಮೂಲಕ ದೊಡ್ಡ ಸಂಚು ನಡೆಸಲಾಗಿದೆ. ಎಸ್ಐಆರ್ ಪ್ರಕ್ರಿಯೆ ಮುಗಿಯುವವರೆಗೂ ಎಚ್ಚರಿಕೆಯಿಂದ ಇರುವಂತೆ ಬೂತ್ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತದೆ’ ಎಂದರು.</p>.<p>‘ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪ್ರತಿಯೊಬ್ಬರೂ ತಮ್ಮ ವಿವರ ಸಲ್ಲಿಸಬೇಕು. ಇಲ್ಲವಾದರೆ ಮತದಾನದ ಹಕ್ಕು ಕಳೆದುಕೊಳ್ಳಬೇಕಾಗುತ್ತದೆ. ಬಡವರು ಮತದಾನದ ಹಕ್ಕು ಕಳೆದುಕೊಂಡರೆ ಪಿಂಚಣಿ, ಗೃಹಲಕ್ಷ್ಮಿ ಸೇರಿದಂತೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಬದ್ಧತೆಯೊಂದಿಗೆ ಕೆಲಸ ಮಾಡುತ್ತದೆ’ ಎಂದು ಹೇಳಿದರು.</p>.<p>‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನಗೆ ಅನುಕೂಲವಾಗುವ ರೀತಿ ಮತದಾರರ ಪಟ್ಟಿ ಪರಿಷ್ಕರಿಸುತ್ತಿರುವ ಆರೋಪವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಜಾಸತ್ತಾತ್ಮಕವಲ್ಲದ, ಅವೈಜ್ಞಾನಿಕ ಪ್ರಕ್ರಿಯೆಯಿಂದ ರಾಜ್ಯದ ಮತದಾರರನ್ನು ರಕ್ಷಿಸಲು ಕಾಂಗ್ರೆಸ್ ಸರ್ಕಾರ, ಪಕ್ಷದ ಮಟ್ಟದಲ್ಲಿ ಚರ್ಚಿಸಲಾಗಿದೆ’ ಎಂದರು.</p>.<p>ಕಾಂಗ್ರೆಸ್ ಪಕ್ಷದ ಇಂಟೆಕ್ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಂಜುನಾಥ, ಗ್ಯಾರಂಟಿ ಸಮಿತಿ ಸದಸ್ಯ ಎಂ.ಕೆ.ಲಿಯಾಖತ್ ಅಲಿ, ಮುಖಂಡರಾದ ಡಿ.ಶಿವಕುಮಾರ, ಬಿ.ಎಸ್.ಸುರೇಶ ಹಾಗೂ ಇನ್ನಿತರರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-43-94223101</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>