ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವುದಾಗಿ ಬಿಜೆಪಿಯವರು ಘೋಷವಾಕ್ಯ ಹೇಳುತ್ತಿದ್ದಾರೆ. ದೇಶದ ಸಂವಿಧಾನವನ್ನು ಬದಲಿಸಲು ಮತ್ತು ಜನರಿಂದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಆ ಪಕ್ಷವು ಇಷ್ಟು ಬಹುಮತವನ್ನು ಬಯಸುತ್ತಿದೆ. ಸರ್ಕಾರವು ಸಂವಿಧಾನಬದ್ಧವಾಗಿ ಆಡಳಿತ ನಡೆಸಿದರೆ, ಯಾವುದೇ ಸಮುದಾಯದ ವಿರುದ್ಧ ಪೂರ್ವಗ್ರಹ ಇಟ್ಟುಕೊಳ್ಳುವ ಪ್ರಮೇಯವೇ ಇರುವುದಿಲ್ಲ. ಆದರೆ, ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಜನರಿಗೆ ನ್ಯಾಯ ಒದಗಿಸಿಲ್ಲ