<p>ಕುರ್ಸಿಯಂಗ್ (ಪಶ್ಚಿಮ ಬಂಗಾಳ) (ಪಿಟಿಐ): ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಹಿಡಿದ ಆರು ತಿಂಗಳ ಒಳಗಾಗಿ ಗೋರ್ಖಾಗಳ ಸಮಸ್ಯೆಯನ್ನು ಬಗೆಹರಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.</p>.<p>‘ಬಿಜೆಪಿ ಹೊರತುಪಡಿಸಿ ಯಾವುದೇ ಪಕ್ಷ ಕೂಡ ಗೋರ್ಖಾಗಳು ಒಪ್ಪುವಂತಹ ಪರಿಹಾರವನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಡಾರ್ಜಿಲಿಂಗ್ ಜಿಲ್ಲೆಯ ಕುರ್ಸಿಯಂಗ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಗೋರ್ಖಾಗಳ ಕಳವಳ ಹಾಗೂ ಆಕಾಂಕ್ಷೆಗಳನ್ನು ಬಿಜೆಪಿಯು ಸ್ಪಷ್ಟವಾಗಿ ಅರಿತುಕೊಂಡಿದೆ. ಅವರ ಬೇಡಿಕೆಗಳನ್ನು ಈಡೇರಿಸಲು ಪಕ್ಷವೂ ಬದ್ಧವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಬಂಗಾಳದಲ್ಲಿ ಬಿಜೆಪಿಯು ಅಧಿಕಾರ ಹಿಡಿದ ಆರು ತಿಂಗಳಲ್ಲಿ ಪ್ರತಿಯೊಬ್ಬ ಗೋರ್ಖಾ ಸಮುದಾಯದ ಪ್ರತಿಯೊಬ್ಬರ ಮುಖದಲ್ಲಿ ನಗು ಅರಳಲಿದೆ. ಗೋರ್ಖಾಗಳ ಸಮಸ್ಯೆಗೆ ನಾವು ಪರಿಹಾರ ಕಂಡುಹಿಡಿಯಲಿದ್ದು, ಶಾಂತಿಯಿಂದ ಬದುಕುವಂತೆ ಅವಕಾಶ ಮಾಡಿಕೊಡಲಿದ್ದೇವೆ’ ಎಂದು ಹೇಳಿದ್ದಾರೆ.</p>.<p>ಪ್ರತಿನಿಧಿ ಕಳುಹಿಸದ ಟಿಎಂಸಿ: ‘ಸಮಸ್ಯೆ ಬಗೆಹರಿಸುವ ಕುರಿತು ಪ್ರತಿ ಸಲವೂ ನಾನು ಸಭೆ ನಡೆಸಿದ ವೇಳೆ ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ಪ್ರತಿನಿಧಿಗಳನ್ನು ಕಳುಹಿಸುತ್ತಿರಲಿಲ್ಲ. ಅದಕ್ಕಾಗಿಯೇ ಒಬ್ಬ ಸಂವಾದಕನನ್ನು ನೇಮಿಸಬೇಕಾಯಿತು’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-51-1148427758</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುರ್ಸಿಯಂಗ್ (ಪಶ್ಚಿಮ ಬಂಗಾಳ) (ಪಿಟಿಐ): ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಹಿಡಿದ ಆರು ತಿಂಗಳ ಒಳಗಾಗಿ ಗೋರ್ಖಾಗಳ ಸಮಸ್ಯೆಯನ್ನು ಬಗೆಹರಿಸಲಾಗುವುದು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ.</p>.<p>‘ಬಿಜೆಪಿ ಹೊರತುಪಡಿಸಿ ಯಾವುದೇ ಪಕ್ಷ ಕೂಡ ಗೋರ್ಖಾಗಳು ಒಪ್ಪುವಂತಹ ಪರಿಹಾರವನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.</p>.<p>ಡಾರ್ಜಿಲಿಂಗ್ ಜಿಲ್ಲೆಯ ಕುರ್ಸಿಯಂಗ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಗೋರ್ಖಾಗಳ ಕಳವಳ ಹಾಗೂ ಆಕಾಂಕ್ಷೆಗಳನ್ನು ಬಿಜೆಪಿಯು ಸ್ಪಷ್ಟವಾಗಿ ಅರಿತುಕೊಂಡಿದೆ. ಅವರ ಬೇಡಿಕೆಗಳನ್ನು ಈಡೇರಿಸಲು ಪಕ್ಷವೂ ಬದ್ಧವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಬಂಗಾಳದಲ್ಲಿ ಬಿಜೆಪಿಯು ಅಧಿಕಾರ ಹಿಡಿದ ಆರು ತಿಂಗಳಲ್ಲಿ ಪ್ರತಿಯೊಬ್ಬ ಗೋರ್ಖಾ ಸಮುದಾಯದ ಪ್ರತಿಯೊಬ್ಬರ ಮುಖದಲ್ಲಿ ನಗು ಅರಳಲಿದೆ. ಗೋರ್ಖಾಗಳ ಸಮಸ್ಯೆಗೆ ನಾವು ಪರಿಹಾರ ಕಂಡುಹಿಡಿಯಲಿದ್ದು, ಶಾಂತಿಯಿಂದ ಬದುಕುವಂತೆ ಅವಕಾಶ ಮಾಡಿಕೊಡಲಿದ್ದೇವೆ’ ಎಂದು ಹೇಳಿದ್ದಾರೆ.</p>.<p>ಪ್ರತಿನಿಧಿ ಕಳುಹಿಸದ ಟಿಎಂಸಿ: ‘ಸಮಸ್ಯೆ ಬಗೆಹರಿಸುವ ಕುರಿತು ಪ್ರತಿ ಸಲವೂ ನಾನು ಸಭೆ ನಡೆಸಿದ ವೇಳೆ ಪಶ್ಚಿಮ ಬಂಗಾಳ ಸರ್ಕಾರವು ಯಾವುದೇ ಪ್ರತಿನಿಧಿಗಳನ್ನು ಕಳುಹಿಸುತ್ತಿರಲಿಲ್ಲ. ಅದಕ್ಕಾಗಿಯೇ ಒಬ್ಬ ಸಂವಾದಕನನ್ನು ನೇಮಿಸಬೇಕಾಯಿತು’ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-51-1148427758</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>