<p>ಹಿರಿಯೂರು: ‘ಹಿರಿಯೂರು ಕ್ಷೇತ್ರದ ಉಪ ಚುನಾವಣೆಗೆ ನಾನು ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ’ ಎಂದು ಬಿಜೆಪಿ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್ ತಿಳಿಸಿದರು.</p>.<p>ತಾಲ್ಲೂಕಿನ ಬುರುಜನರೊಪ್ಪ ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆ ಹಾಗೂ ಉಪಚುನಾವಣೆ ಕುರಿತು ಚರ್ಚಿಸಲು ಭಾನುವಾರ ಕರೆದಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ನಾನು 2008ರಿಂದ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದು, ಕಾರ್ಯಕರ್ತರು ಹಾಗೂ ಸ್ಥಳೀಯರ ಕಷ್ಟ–ಸುಖಗಳಲ್ಲಿ ಭಾಗಿಯಾಗಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಚುನಾವಣೆ ಎದುರಿಸಲು ಸಿದ್ಧನಿದ್ದೇನೆ’ ಎಂದರು.</p>.<p>‘ಲಕ್ಷ್ಮೀಕಾಂತ್ ಅವರಿಗೆ ಪಕ್ಷ ಟಿಕೆಟ್ ನೀಡಿದಲ್ಲಿ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ, ಹೈಕಮಾಂಡ್ ಅವಕಾಶ ನೀಡಿದಲ್ಲಿ ನಾನೂ ಉಪಚುನಾವಣೆ ಎದುರಿಸಲು ಸಿದ್ಧ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಅಭಿನಂದನ್ ಹೇಳಿದರು.</p>.<p>‘ಈ ಬಾರಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಬೇಕು. ಬಿಜೆಪಿ ಅಥವಾ ಜೆಡಿಎಸ್ನಿಂದ ಯಾರಿಗೇ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಗೆಲುವಿಗಾಗಿ ಶ್ರಮಿಸೋಣ’ ಎಂದು ಜೆಡಿಎಸ್ ಮುಖಂಡ ರವೀಂದ್ರಪ್ಪ ತಿಳಿಸಿದರು.</p>.<p>ಸಭೆಯಲ್ಲಿದ್ದ ಬಹುತೇಕ ಮುಖಂಡರು, ಕಾರ್ಯಕರ್ತರು ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡುವಂತೆ ಸಂಸದ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಒತ್ತಾಯಿಸೋಣ ಎಂದು ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-1385346301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ‘ಹಿರಿಯೂರು ಕ್ಷೇತ್ರದ ಉಪ ಚುನಾವಣೆಗೆ ನಾನು ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದೇನೆ’ ಎಂದು ಬಿಜೆಪಿ ಮುಖಂಡ ಎನ್.ಆರ್. ಲಕ್ಷ್ಮೀಕಾಂತ್ ತಿಳಿಸಿದರು.</p>.<p>ತಾಲ್ಲೂಕಿನ ಬುರುಜನರೊಪ್ಪ ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಹಿರಿಯೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಬೆಳವಣಿಗೆ ಹಾಗೂ ಉಪಚುನಾವಣೆ ಕುರಿತು ಚರ್ಚಿಸಲು ಭಾನುವಾರ ಕರೆದಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ನಾನು 2008ರಿಂದ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದು, ಕಾರ್ಯಕರ್ತರು ಹಾಗೂ ಸ್ಥಳೀಯರ ಕಷ್ಟ–ಸುಖಗಳಲ್ಲಿ ಭಾಗಿಯಾಗಿದ್ದೇನೆ. ಪಕ್ಷ ಟಿಕೆಟ್ ನೀಡಿದರೆ ಚುನಾವಣೆ ಎದುರಿಸಲು ಸಿದ್ಧನಿದ್ದೇನೆ’ ಎಂದರು.</p>.<p>‘ಲಕ್ಷ್ಮೀಕಾಂತ್ ಅವರಿಗೆ ಪಕ್ಷ ಟಿಕೆಟ್ ನೀಡಿದಲ್ಲಿ ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಒಂದು ವೇಳೆ ಅವರು ಸ್ಪರ್ಧಿಸದಿದ್ದರೆ, ಹೈಕಮಾಂಡ್ ಅವಕಾಶ ನೀಡಿದಲ್ಲಿ ನಾನೂ ಉಪಚುನಾವಣೆ ಎದುರಿಸಲು ಸಿದ್ಧ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಅಭಿನಂದನ್ ಹೇಳಿದರು.</p>.<p>‘ಈ ಬಾರಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಬೇಕು. ಬಿಜೆಪಿ ಅಥವಾ ಜೆಡಿಎಸ್ನಿಂದ ಯಾರಿಗೇ ಟಿಕೆಟ್ ನೀಡಿದರೂ ಒಗ್ಗಟ್ಟಿನಿಂದ ಗೆಲುವಿಗಾಗಿ ಶ್ರಮಿಸೋಣ’ ಎಂದು ಜೆಡಿಎಸ್ ಮುಖಂಡ ರವೀಂದ್ರಪ್ಪ ತಿಳಿಸಿದರು.</p>.<p>ಸಭೆಯಲ್ಲಿದ್ದ ಬಹುತೇಕ ಮುಖಂಡರು, ಕಾರ್ಯಕರ್ತರು ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡುವಂತೆ ಸಂಸದ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿ ಒತ್ತಾಯಿಸೋಣ ಎಂದು ಸಲಹೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-44-1385346301</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>