<p>ಹುಬ್ಬಳ್ಳಿ: ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೈತ್ರಿಕೂಟ ಜಯಗಳಿಸಿದ ಹಿನ್ನೆಲೆಯಲ್ಲಿ ನಗರದ ದುರ್ಗದ ಬೈಲ್ ವೃತ್ತದಲ್ಲಿ ಸೋಮವಾರ ಹು–ಧಾ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿದರು.</p>.<p>ದುರ್ಗದ ಬೈಲ್ ವೃತ್ತದ ಸುತ್ತಮುತ್ತ ಇರುವ ವ್ಯಾಪಾರಸ್ಥರಿಗೆ ಸಿಹಿ ವಿತರಿಸಿ, ಸೆಲ್ಫಿ ತೆಗೆದುಕೊಂಡರು. ಬಿಜೆಪಿ ಪರ ಘೋಷಣೆ ಕೂಗಿ, ಪಕ್ಷದ ಬಾವುಟಕ್ಕೆ ಪುಷ್ಪವೃಷ್ಟಿ ಮಾಡಿದರು.</p>.<p>‘ಪಶ್ಚಿಮ ಬಂಗಾಲದಲ್ಲಿ ಗೆಲುವು ಸಾಧಿಸುವುದು ಸವಾಲಾಗಿತ್ತು. 15 ವರ್ಷ ಆಡಳಿತ ನಡೆಸಿದ ಮಮತಾಬ್ಯಾನರ್ಜಿ ಅವರ ಟಿಎಂಸಿ ಪಕ್ಷವನ್ನು ಮತದಾರರು ಸೋಲಿಸಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ತಮಿಳುನಾಡಿನಲ್ಲಿ ಬಹುಮತ ಸಿಗದಿದ್ದರೂ ಉತ್ತಮ ಫಲಿತಾಂಶ ದೊರಕಿದೆ’ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.</p>.<p>‘ರಾಜ್ಯದಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ನಿರಸವಾಗಿದೆ. ಎರಡರಲ್ಲಿ ಒಂದು ಕ್ಷೇತ್ರದಲ್ಲಾದರೂ ಗೆಲ್ಲುವ ನಿರೀಕ್ಷೆಯಿತ್ತು. ಸೋಲಿಗೆ ಕಾರಣವೇನು ಎನ್ನುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ’ ಎಂದರು.</p>.<p>ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳಿಂದ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಈ ಬಾರಿಯ ಚುನಾವಣೆಯಲ್ಲಿ ಶೇ 92ರಷ್ಟು ಮತದಾನವಾಗಿದ್ದು, ಬಿಜೆಪಿ ಗೆಲುವಿಗೆ ಕಾರಣವಾಗಿದೆ. 5 ರಾಜ್ಯಗಳಲ್ಲಿ ಮೂರು ರಾಜ್ಯಗಳನ್ನು ಗೆದ್ದಿದ್ದು, ತಮಿಳುನಾಡಿನಲ್ಲಿ ಎನ್ಡಿಎ ಒಕ್ಕೂಟದ ಪಕ್ಷ ಗೆಲುವು ಸಾಧಿಸಿದೆ. ರಾಜ್ಯದ ಉಪ ಚುನಾವಣೆಯಲ್ಲಿ ಹಿನ್ನಡೆಯಾಗಿದೆ’ ಎಂದು ಹೇಳಿದರು.</p>.<p>ಮುಖಂಡರಾದ ತಿಪ್ಪಣ್ಣ ಮಜ್ಜಗಿ,ಅಶೋಕ ಕಾಟವೆ, ಜ್ಯೋತಿ ಪಾಟೀಲ, ಸಂತೋಷ ಚವ್ಹಾಣ್, ಪ್ರವೀಣ ಪವಾರ, ರಾಮನಗೌಡ ಶೆಟ್ಟಿನಗೌಡ್ರ, ಅಕ್ಕಮ್ಮ ಹೆಗಡೆ, ಅರ್ಚನಾ ಕೆ.,ಉಮಾ ಮುಕುಂದ, ಶಿವು ಮೆಣಸಿನಕಾಯಿ, ಬೀರಪ್ಪ ಖಂಡೆಕರ, ಪ್ರಭು ನವಲಗುಂದಮಠ, ರಾಜು ಕೋರ್ಯಾಣಮಠ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-24-992859080</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಪಶ್ಚಿಮ ಬಂಗಾಳ, ಪುದುಚೇರಿ ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೈತ್ರಿಕೂಟ ಜಯಗಳಿಸಿದ ಹಿನ್ನೆಲೆಯಲ್ಲಿ ನಗರದ ದುರ್ಗದ ಬೈಲ್ ವೃತ್ತದಲ್ಲಿ ಸೋಮವಾರ ಹು–ಧಾ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು. ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿದರು.</p>.<p>ದುರ್ಗದ ಬೈಲ್ ವೃತ್ತದ ಸುತ್ತಮುತ್ತ ಇರುವ ವ್ಯಾಪಾರಸ್ಥರಿಗೆ ಸಿಹಿ ವಿತರಿಸಿ, ಸೆಲ್ಫಿ ತೆಗೆದುಕೊಂಡರು. ಬಿಜೆಪಿ ಪರ ಘೋಷಣೆ ಕೂಗಿ, ಪಕ್ಷದ ಬಾವುಟಕ್ಕೆ ಪುಷ್ಪವೃಷ್ಟಿ ಮಾಡಿದರು.</p>.<p>‘ಪಶ್ಚಿಮ ಬಂಗಾಲದಲ್ಲಿ ಗೆಲುವು ಸಾಧಿಸುವುದು ಸವಾಲಾಗಿತ್ತು. 15 ವರ್ಷ ಆಡಳಿತ ನಡೆಸಿದ ಮಮತಾಬ್ಯಾನರ್ಜಿ ಅವರ ಟಿಎಂಸಿ ಪಕ್ಷವನ್ನು ಮತದಾರರು ಸೋಲಿಸಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ತಮಿಳುನಾಡಿನಲ್ಲಿ ಬಹುಮತ ಸಿಗದಿದ್ದರೂ ಉತ್ತಮ ಫಲಿತಾಂಶ ದೊರಕಿದೆ’ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.</p>.<p>‘ರಾಜ್ಯದಲ್ಲಿ ನಡೆದ ಉಪ ಚುನಾವಣೆ ಫಲಿತಾಂಶ ನಿರಸವಾಗಿದೆ. ಎರಡರಲ್ಲಿ ಒಂದು ಕ್ಷೇತ್ರದಲ್ಲಾದರೂ ಗೆಲ್ಲುವ ನಿರೀಕ್ಷೆಯಿತ್ತು. ಸೋಲಿಗೆ ಕಾರಣವೇನು ಎನ್ನುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇವೆ’ ಎಂದರು.</p>.<p>ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ‘ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳಿಂದ ಭ್ರಷ್ಟಾಚಾರ ತಾಂಡವವಾಡುತ್ತಿತ್ತು. ಈ ಬಾರಿಯ ಚುನಾವಣೆಯಲ್ಲಿ ಶೇ 92ರಷ್ಟು ಮತದಾನವಾಗಿದ್ದು, ಬಿಜೆಪಿ ಗೆಲುವಿಗೆ ಕಾರಣವಾಗಿದೆ. 5 ರಾಜ್ಯಗಳಲ್ಲಿ ಮೂರು ರಾಜ್ಯಗಳನ್ನು ಗೆದ್ದಿದ್ದು, ತಮಿಳುನಾಡಿನಲ್ಲಿ ಎನ್ಡಿಎ ಒಕ್ಕೂಟದ ಪಕ್ಷ ಗೆಲುವು ಸಾಧಿಸಿದೆ. ರಾಜ್ಯದ ಉಪ ಚುನಾವಣೆಯಲ್ಲಿ ಹಿನ್ನಡೆಯಾಗಿದೆ’ ಎಂದು ಹೇಳಿದರು.</p>.<p>ಮುಖಂಡರಾದ ತಿಪ್ಪಣ್ಣ ಮಜ್ಜಗಿ,ಅಶೋಕ ಕಾಟವೆ, ಜ್ಯೋತಿ ಪಾಟೀಲ, ಸಂತೋಷ ಚವ್ಹಾಣ್, ಪ್ರವೀಣ ಪವಾರ, ರಾಮನಗೌಡ ಶೆಟ್ಟಿನಗೌಡ್ರ, ಅಕ್ಕಮ್ಮ ಹೆಗಡೆ, ಅರ್ಚನಾ ಕೆ.,ಉಮಾ ಮುಕುಂದ, ಶಿವು ಮೆಣಸಿನಕಾಯಿ, ಬೀರಪ್ಪ ಖಂಡೆಕರ, ಪ್ರಭು ನವಲಗುಂದಮಠ, ರಾಜು ಕೋರ್ಯಾಣಮಠ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-24-992859080</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>